‘ಯಡಿಯೂರಪ್ಪ ಅವರು ಬಹಳ ಮಾತನಾಡುತ್ತಾರೆ. ಆದರೆ, ಪರಿಹಾರಕ್ಕಾಗಿ ಹಣ ಬಿಡುಗಡೆ ಮಾಡುವಂತೆ ಏಕೆ ಒತ್ತಡ ಹೇರುತ್ತಿಲ್ಲ. ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಪ್ರಧಾನಿಯವರೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನು ಕಳಿಸಿದ್ದೇವೆ ಎನ್ನುತ್ತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ? ಈವರೆಗೆ ಎಷ್ಟು ನಷ್ಟ ಆಗಿದೆ ಎಂಬ ವರದಿಯನ್ನೂ ಕಳುಹಿಸಿಲ್ಲ’ ಎಂದ ಅವರು ಹರಿಹಾಯ್ದರು.