ಬೆಂಗಳೂರು: ‘ಅನ್ನಭಾಗ್ಯ’ ಕಾರ್ಯಕ್ರಮವೂ ಸೇರಿದಂತೆ ಹಿಂದಿನ ಸರ್ಕಾರ ಜಾರಿಗೆ ತಂದ ಜನಪ್ರಿಯ ಕಾರ್ಯಕ್ರಮಗಳನ್ನು ರದ್ದು ಮಾಡುವುದಿಲ್ಲ ಎಂಬ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸ್ಪಷ್ಟನೆಯನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನುಡಿದಂತೆ ನಡೆಯುವಿರಿ ಎಂದು ನಂಬಿದ್ದೇನೆ ಯಡಿಯೂರಪ್ಪನವರೇ ಎಂದು ಟ್ವೀಟ್ ಮಾಡಿದ್ದಾರೆ.
ಸನ್ಮಾನ್ಯ @CMofKarnataka ಶ್ರೀ ಬಿ.ಎಸ್.ಯಡಿಯೂರಪ್ಪನವರೇ, ನೀವು ನುಡಿದಂತೆ ನಡೆಯುತ್ತೀರಿ ಎಂದು ನಂಬಿದ್ದೇನೆ. ಧನ್ಯವಾದಗಳು pic.twitter.com/e1aq2X5pBh
— Siddaramaiah (@siddaramaiah) August 17, 2019
ರೈತರಿಗೆ ನೇರವಾಗಿ ಹಣ ನೀಡುವ ಕಿಸಾನ್ ಸಮ್ಮಾನ್ ಯೋಜನೆಗೆ ಅನುದಾನ ಹೊಂದಿಸಲು ಈ ಹಿಂದಿನ ಸರ್ಕಾರಗಳ ಯೋಜನೆಗಳನ್ನು ರದ್ದು ಮಾಡುವ ಅಥವಾ ಅನುದಾನ ಕಡಿತ ಮಾಡುವ ಪ್ರಸ್ತಾವವನ್ನು ಅಧಿಕಾರಿಗಳು ಸರ್ಕಾರದ ಮುಂದಿಟ್ಟಿದ್ದರು. ಇದಕ್ಕೆ ಸರ್ಕಾರವೂ ಸಮ್ಮತಿಸಿದೆ ಎಂಬ ವರದಿಗಳು ಶನಿವಾರ ಸದ್ದು ಮಾಡಿತ್ತು.
ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು,ಎಚ್ಚರ ಇರಲಿ.
— Siddaramaiah (@siddaramaiah) August 17, 2019
ಇಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ.@INCKarnataka pic.twitter.com/NKvOa8YUTX
ಹಾಗೇನಾದರೂ, ಸರ್ಕಾರ ಯೋಜನೆಗಳಿಗೆ ಕತ್ತರಿ ಹಾಕಿದರೆ, ಅನುದಾನ ಮೊಟಕುಗೊಳಿಸಿದರೆ ಕಾಂಗ್ರೆಸ್ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿತ್ತು. ಇದೇ ಹಿನ್ನೆಲೆಯಲ್ಲಿ ಶನಿವಾರ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ, ‘ಜನಪ್ರಿಯ ಯೋಜನೆಗಳನ್ನು ರದ್ದು ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಅನ್ನಾಭಾಗ್ಯ ಯೋಜನೆಮುಂದುವರಿಸಲು ಈಗಾಗಲೇ ಸಹಿ ಮಾಡಿದ್ದೇನೆ,’ ಎಂದು ಸ್ಪಷ್ಟಪಡಿಸಿದ್ದರು.
ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ.
— CM of Karnataka (@CMofKarnataka) August 17, 2019
ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಿದ್ದೇನೆ. pic.twitter.com/WMXt9QfGdC
ಇದೇ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ, ನೀವು ನುಡಿದಂತೆ ನಡೆಯುತ್ತೀರಿ ಎಂದು ನಂಬಿದ್ದೇನೆ. ಧನ್ಯವಾದಗಳು,’ ಎಂದಿದ್ದಾರೆ.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.