ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನುಡಿದಂತೆ ನಡೆಯುತ್ತೀರೆಂದು ನಂಬಿದ್ದೇನೆ ಯಡಿಯೂರಪ್ಪನವರೇ: ಸಿದ್ದರಾಮಯ್ಯ ಟ್ವೀಟ್‌

Last Updated 18 ಆಗಸ್ಟ್ 2019, 3:55 IST
ಅಕ್ಷರ ಗಾತ್ರ

ಬೆಂಗಳೂರು: ‘ಅನ್ನಭಾಗ್ಯ’ ಕಾರ್ಯಕ್ರಮವೂ ಸೇರಿದಂತೆ ಹಿಂದಿನ ಸರ್ಕಾರ ಜಾರಿಗೆ ತಂದ ಜನಪ್ರಿಯ ಕಾರ್ಯಕ್ರಮಗಳನ್ನು ರದ್ದು ಮಾಡುವುದಿಲ್ಲ ಎಂಬ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ಸ್ಪಷ್ಟನೆಯನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನುಡಿದಂತೆ ನಡೆಯುವಿರಿ ಎಂದು ನಂಬಿದ್ದೇನೆ ಯಡಿಯೂರಪ್ಪನವರೇ ಎಂದು ಟ್ವೀಟ್‌ ಮಾಡಿದ್ದಾರೆ.

ರೈತರಿಗೆ ನೇರವಾಗಿ ಹಣ ನೀಡುವ ಕಿಸಾನ್‌ ಸಮ್ಮಾನ್‌ ಯೋಜನೆಗೆ ಅನುದಾನ ಹೊಂದಿಸಲು ಈ ಹಿಂದಿನ ಸರ್ಕಾರಗಳ ಯೋಜನೆಗಳನ್ನು ರದ್ದು ಮಾಡುವ ಅಥವಾ ಅನುದಾನ ಕಡಿತ ಮಾಡುವ ಪ್ರಸ್ತಾವವನ್ನು ಅಧಿಕಾರಿಗಳು ಸರ್ಕಾರದ ಮುಂದಿಟ್ಟಿದ್ದರು. ಇದಕ್ಕೆ ಸರ್ಕಾರವೂ ಸಮ್ಮತಿಸಿದೆ ಎಂಬ ವರದಿಗಳು ಶನಿವಾರ ಸದ್ದು ಮಾಡಿತ್ತು.

ಹಾಗೇನಾದರೂ, ಸರ್ಕಾರ ಯೋಜನೆಗಳಿಗೆ ಕತ್ತರಿ ಹಾಕಿದರೆ, ಅನುದಾನ ಮೊಟಕುಗೊಳಿಸಿದರೆ ಕಾಂಗ್ರೆಸ್‌ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿತ್ತು. ಇದೇ ಹಿನ್ನೆಲೆಯಲ್ಲಿ ಶನಿವಾರ ಟ್ವೀಟ್‌ ಮಾಡಿದ್ದ ಮುಖ್ಯಮಂತ್ರಿ, ‘ಜನಪ್ರಿಯ ಯೋಜನೆಗಳನ್ನು ರದ್ದು ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಅನ್ನಾಭಾಗ್ಯ ಯೋಜನೆಮುಂದುವರಿಸಲು ಈಗಾಗಲೇ ಸಹಿ ಮಾಡಿದ್ದೇನೆ,’ ಎಂದು ಸ್ಪಷ್ಟಪಡಿಸಿದ್ದರು.

ಇದೇ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ, ನೀವು ನುಡಿದಂತೆ ನಡೆಯುತ್ತೀರಿ ಎಂದು ನಂಬಿದ್ದೇನೆ. ಧನ್ಯವಾದಗಳು,’ ಎಂದಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT