ಬೆಂಗಳೂರು:ರೈತ ಸಮಾವೇಶದ ಪ್ರಯುಕ್ತ ಗುರುವಾರ ತುಮಕೂರಿಗೆ ಭೇಟಿ ನೀಡಿದ್ದಪ್ರಧಾನಿ ಮೋದಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವಿಟ್ ಮಾಡುವ ಮೂಲಕ ಆರ್ಥಿಕ ಹಿನ್ನಡೆ, ನೆರೆ ಪರಿಹಾರ, ಮಹದಾಯಿ ವಿವಾದ, ಕಾವೇರಿ ನೀರು ಹಂಚಿಕೆ, ಜಿಎಸ್ಟಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಕಳೆದ ವರ್ಷ ಉತ್ತರ ಕರ್ನಾಟಕದಲ್ಲಿ ಉಂಟಾದ ನೆರೆ ಹಾವಳಿ ಬಗ್ಗೆಪ್ರಸ್ತಾಪಿಸಿರುವ ಸಿದ್ದರಾಮಯ್ಯ, ‘ರಾಜ್ಯದ ಜನ ನೆರೆ ನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ನೀಡಲು ನೀವು ಬರಲಿಲ್ಲ, ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ?‘ ಎಂದು ಪ್ರಶ್ನಿಸಿದ್ದಾರೆ.
ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ,
— Siddaramaiah (@siddaramaiah) January 2, 2020
ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿಕೊಡಲಿಲ್ಲ,
ಕೇಂದ್ರ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ
ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ @narenedramodi ಅವರೇ?#ಉತ್ತರಕೊಡಿಮೋದಿ
ಆಪರೇಷನ್ ಕಮಲದ ವಿಚಾರದ ಬಗ್ಗೆ ಟ್ವಿಟ್ ಮಾಡಿರುವ ಅವರು, ’ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ,ಇಡಿ,ಸಿಬಿಐ ಛೂ ಬಿಡ್ತೀರಿ. ಗಣಿಕಳ್ಳರು, ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ‘ಸ್ವಚ್ಚ ಭಾರತ್?’ ಎಂದು ಪ್ರಶ್ನಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ,
— Siddaramaiah (@siddaramaiah) January 2, 2020
ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ.
ರಾಜಕೀಯ ವಿರೋಧಿಗಳ ಮೇಲೆ ಐಟಿ,ಇಡಿ,ಸಿಬಿಐ
ಛೂ ಬಿಡ್ತೀರಿ,
ಗಣಿಕಳ್ಳರು,ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ.
ಇದೇನಾ ನಿಮ್ಮ ‘’ಸ್ವಚ್ಚ ಭಾರತ್’’ ?#ಉತ್ತರಕೊಡಿಮೋದಿ
ತುಮಕೂರು ಸಿದ್ದಗಂಗಾ ಮಠದಲ್ಲಿ ಪ್ರಧಾನಿ ಮೋದಿ ಮಾಡಿರುವ ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ‘ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ ನರೇಂದ್ರ ಮೋದಿ ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು’ ಎಂದು ಹರಿಹಾಯ್ದಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ.
— Siddaramaiah (@siddaramaiah) January 2, 2020
ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ.
ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ @narendramodi ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು.
ಇನ್ನುಳಿದಂತೆ ಜಿಎಸ್ಟಿ ಪರಿಹಾರ, ಸ್ವಚ್ಚಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (NRDWP) ಮತ್ತು ನರೇಗಾ ಯೋಜನೆಗಳಿಗೆ ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಹಣ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.
ಜಿಎಸ್ಟಿ ಪರಿಹಾರ ತಿಂಗಳಿಗೆ ರೂ.3600 ಕೋಟಿ ಬರ್ಬೇಕು.
— Siddaramaiah (@siddaramaiah) January 2, 2020
ಕಳೆದ ಸೆಪ್ಟೆಂಬರ್ನಿಂದ ಪೈಸೆ ಹಣ ಬಂದಿಲ್ಲ.
ಸುಮಾರು ರೂ.14-15 ಸಾವಿರ ಕೋಟಿ ಬಾಕಿ ಇದೆ.@narendramodi ಅವರೇ ಕೇಂದ್ರಸರ್ಕಾರವನ್ನು ದಿವಾಳಿ ಮಾಡ್ತಿದ್ದೀರಿ, ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ?#ಉತ್ತರಕೊಡಿಮೋದಿ
ಸ್ವಚ್ಚಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (NRDWP) ಮತ್ತು ನರೇಗಾ ಯೋಜನೆಗಳಿಗಾಗಿ ರಾಜ್ಯಕ್ಕೆ ನೀಡಬೇಕಾದ ಹಣದಲ್ಲಿ ಎಷ್ಟುಸಾವಿರ ಕೋಟಿ ರೂಪಾಯಿ ಬಾಕಿ ಇದೆ ಗೊತ್ತಾ?@narendramodi ಅವರೇ, ಈ ಮಾಹಿತಿಯನ್ನು @BSYBJP ಅವರನ್ನೇ ಕೇಳಿ ತಿಳ್ಕೊಂಡು ರಾಜ್ಯದ ಜನತೆಗೆ ಹೇಳಿ ಬಿಡಿ.#ಉತ್ತರಕೊಡಿಮೋದಿ
— Siddaramaiah (@siddaramaiah) January 2, 2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.