ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರುದ್ಯೋಗ ವಿರುದ್ಧ ಅಭಿಯಾನ: ಸಿದ್ದರಾಮಯ್ಯ

Last Updated 24 ಜನವರಿ 2020, 23:24 IST
ಅಕ್ಷರ ಗಾತ್ರ

ಬೆಂಗಳೂರು: ಹದಗೆಟ್ಟಿರುವ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದಕ್ಕೆ ಕ್ರಮ ಕೈಗೊಳ್ಳದಕೇಂದ್ರದ ವಿರುದ್ಧಹರಿಹಾಯ್ದಿರುವವಿಧಾನಸಭೆವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, 8151994411 ಸಂಖ್ಯೆಗೆ ಮಿಸ್ಡ್‌ಕಾಲ್ ನೀಡುವ ಮೂಲಕ ನಿರುದ್ಯೋಗ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಳ್ಳಲು ಜನರಲ್ಲಿ ವಿನಂತಿಸಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರ ಅನರ್ಥ ಆರ್ಥಿಕತೆ ಮತ್ತು ದೂರದೃಷ್ಟಿ ಇಲ್ಲದ ಆಡಳಿತಾತ್ಮಕ ಕ್ರಮಗಳಿಂದ ದೇಶದ ಯುವಕರು ಕಂಗಾಲಾಗಿದ್ದು, ಅಭದ್ರತೆ ಎದುರಿಸುತ್ತಿದ್ದಾರೆ. ಬನ್ನಿ, ‘ಬಿಜೆಪಿ ಫಾರ್‌ ಇಂಡಿಯಾ’ ಎಂಬ ಸುಳ್ಳುಗಳ ವಿರುದ್ಧ ಧ್ವನಿ ಎತ್ತೋಣ’ ಎಂದು ಟ್ವೀಟ್‌ ಮಾಡಿದ್ದಾರೆ.

‘ರಾಜ್ಯದಲ್ಲಿ ಎದುರಾಗಿದ್ದ ನೆರೆ ಮತ್ತು ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರವನ್ನೂ ತರಾಟೆಗೆ ತೆಗೆದು
ಕೊಂಡಿರುವ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಡಳಿತದಲ್ಲಿ ಸಾಮಾಜಿಕ ಅಶಾಂತಿ ನಿರ್ಮಾಣವಾಗಿದೆ’ ಎಂದು ಅವರು ತರಾಟೆಗೆ ತೆಗೆದು ಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT