ಬೆಂಗಳೂರು: ಹದಗೆಟ್ಟಿರುವ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದಕ್ಕೆ ಕ್ರಮ ಕೈಗೊಳ್ಳದಕೇಂದ್ರದ ವಿರುದ್ಧಹರಿಹಾಯ್ದಿರುವವಿಧಾನಸಭೆವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, 8151994411 ಸಂಖ್ಯೆಗೆ ಮಿಸ್ಡ್ಕಾಲ್ ನೀಡುವ ಮೂಲಕ ನಿರುದ್ಯೋಗ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಳ್ಳಲು ಜನರಲ್ಲಿ ವಿನಂತಿಸಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಅವರ ಅನರ್ಥ ಆರ್ಥಿಕತೆ ಮತ್ತು ದೂರದೃಷ್ಟಿ ಇಲ್ಲದ ಆಡಳಿತಾತ್ಮಕ ಕ್ರಮಗಳಿಂದ ದೇಶದ ಯುವಕರು ಕಂಗಾಲಾಗಿದ್ದು, ಅಭದ್ರತೆ ಎದುರಿಸುತ್ತಿದ್ದಾರೆ. ಬನ್ನಿ, ‘ಬಿಜೆಪಿ ಫಾರ್ ಇಂಡಿಯಾ’ ಎಂಬ ಸುಳ್ಳುಗಳ ವಿರುದ್ಧ ಧ್ವನಿ ಎತ್ತೋಣ’ ಎಂದು ಟ್ವೀಟ್ ಮಾಡಿದ್ದಾರೆ.
‘ರಾಜ್ಯದಲ್ಲಿ ಎದುರಾಗಿದ್ದ ನೆರೆ ಮತ್ತು ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರವನ್ನೂ ತರಾಟೆಗೆ ತೆಗೆದು ಕೊಂಡಿರುವ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತದಲ್ಲಿ ಸಾಮಾಜಿಕ ಅಶಾಂತಿ ನಿರ್ಮಾಣವಾಗಿದೆ’ ಎಂದು ಅವರು ತರಾಟೆಗೆ ತೆಗೆದು ಕೊಂಡಿದ್ದಾರೆ.