<p><strong>ಬೆಂಗಳೂರು:</strong> ‘ವಿಧಾನಸೌಧದಲ್ಲಿ ಬಿಜೆಪಿ ಶಾಸಕರು, ಕಾರ್ಯಕರ್ತರು ಗೂಂಡಾಗಳಂತೆ ವರ್ತಿಸಿದ್ದಾರೆ’ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಆರೋಪಿಸಿದರು.</p>.<p>‘ಕಾಂಗ್ರೆಸ್ ಚಿಹ್ನೆ ಮೇಲೆ ಸುಧಾಕರ್ ಆಯ್ಕೆ ಆಗಿದ್ದಾರೆ. ಬಿಜೆಪಿಗೂ ಸುಧಾಕರ್ಗೂ ಏನು ಸಂಬಂಧ? ನಾನು ಶಾಸಕಾಂಗ ಪಕ್ಷದ ನಾಯಕ ಆಗಿರುವುದರಿಂದ ನಮ್ಮ ಪಕ್ಷದ ಶಾಸಕರ ಜತೆ ಚರ್ಚಿಸಲು ಬಂದಿದ್ದೇನೆ. ಆದರೆ ಇಲ್ಲಿ ನೋಡಿದರೆ ಬಿಜೆಪಿಯವರು ಗೂಂಡಾಗಳಂತೆ ನಡೆದುಕೊಂಡಿದ್ದಾರೆ‘ ಎಂದರು.</p>.<p>‘ಗದ್ದಲ ನಡೆಸುತ್ತಿರುವುದರ ಹಿಂದೆ ಬಿಜೆಪಿ ನಾಯಕರು ಇದ್ದಾರೆ. ನಮ್ಮ ಶಾಸಕರ ಜತೆ ಮಾತನಾಡಲು ಬಂದರೆ ತಡೆಯುತ್ತಾರೆ. ಇದೆಲ್ಲವನ್ನೂ ಗಮನಿಸಿದರೆ ಶಾಸಕರನ್ನು ಖರೀದಿಸುತ್ತಿರುವುದು ಸ್ಪಷ್ಟವಾಗುತ್ತದೆ. ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದ್ದಾರೆ’ ಎಂದು ಟೀಕಿಸಿದರು.</p>.<p>ವಿಧಾನಸೌಧದಲ್ಲಿ ನಡೆದ ಘಟನೆಗೂ ಬಿಜೆಪಿಗೂ ಸಂಬಂಧ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೂರಿದರು.</p>.<p class="Subhead"><strong>ಬಿಜೆಪಿ ಆರೋಪ:</strong> ವಿಧಾನಸೌಧದ ಒಳಗೆ ಶಾಸಕರ ಮೇಲೆ ಗೂಂಡಾಗಿರಿ ನಡೆಸಲಾಗಿದೆ. ಈ ವಿಚಾರ ವಿಧಾನಸಭಾಧ್ಯಕ್ಷರಿಗೆ ಗೊತ್ತಿದ್ದೂ ಹಲ್ಲೆಗೆ ಒಳಗಾದ ಶಾಸಕರಿಗೆ ರಕ್ಷಣೆ ನೀಡಿಲ್ಲ. ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು. ರಾಜೀನಾಮೆ ನೀಡಲು ಬರುವ ಶಾಸಕರಿಗೆ ರಕ್ಷಣೆ ನೀಡಬೇಕು ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿಧಾನಸೌಧದಲ್ಲಿ ಬಿಜೆಪಿ ಶಾಸಕರು, ಕಾರ್ಯಕರ್ತರು ಗೂಂಡಾಗಳಂತೆ ವರ್ತಿಸಿದ್ದಾರೆ’ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಆರೋಪಿಸಿದರು.</p>.<p>‘ಕಾಂಗ್ರೆಸ್ ಚಿಹ್ನೆ ಮೇಲೆ ಸುಧಾಕರ್ ಆಯ್ಕೆ ಆಗಿದ್ದಾರೆ. ಬಿಜೆಪಿಗೂ ಸುಧಾಕರ್ಗೂ ಏನು ಸಂಬಂಧ? ನಾನು ಶಾಸಕಾಂಗ ಪಕ್ಷದ ನಾಯಕ ಆಗಿರುವುದರಿಂದ ನಮ್ಮ ಪಕ್ಷದ ಶಾಸಕರ ಜತೆ ಚರ್ಚಿಸಲು ಬಂದಿದ್ದೇನೆ. ಆದರೆ ಇಲ್ಲಿ ನೋಡಿದರೆ ಬಿಜೆಪಿಯವರು ಗೂಂಡಾಗಳಂತೆ ನಡೆದುಕೊಂಡಿದ್ದಾರೆ‘ ಎಂದರು.</p>.<p>‘ಗದ್ದಲ ನಡೆಸುತ್ತಿರುವುದರ ಹಿಂದೆ ಬಿಜೆಪಿ ನಾಯಕರು ಇದ್ದಾರೆ. ನಮ್ಮ ಶಾಸಕರ ಜತೆ ಮಾತನಾಡಲು ಬಂದರೆ ತಡೆಯುತ್ತಾರೆ. ಇದೆಲ್ಲವನ್ನೂ ಗಮನಿಸಿದರೆ ಶಾಸಕರನ್ನು ಖರೀದಿಸುತ್ತಿರುವುದು ಸ್ಪಷ್ಟವಾಗುತ್ತದೆ. ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದ್ದಾರೆ’ ಎಂದು ಟೀಕಿಸಿದರು.</p>.<p>ವಿಧಾನಸೌಧದಲ್ಲಿ ನಡೆದ ಘಟನೆಗೂ ಬಿಜೆಪಿಗೂ ಸಂಬಂಧ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೂರಿದರು.</p>.<p class="Subhead"><strong>ಬಿಜೆಪಿ ಆರೋಪ:</strong> ವಿಧಾನಸೌಧದ ಒಳಗೆ ಶಾಸಕರ ಮೇಲೆ ಗೂಂಡಾಗಿರಿ ನಡೆಸಲಾಗಿದೆ. ಈ ವಿಚಾರ ವಿಧಾನಸಭಾಧ್ಯಕ್ಷರಿಗೆ ಗೊತ್ತಿದ್ದೂ ಹಲ್ಲೆಗೆ ಒಳಗಾದ ಶಾಸಕರಿಗೆ ರಕ್ಷಣೆ ನೀಡಿಲ್ಲ. ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು. ರಾಜೀನಾಮೆ ನೀಡಲು ಬರುವ ಶಾಸಕರಿಗೆ ರಕ್ಷಣೆ ನೀಡಬೇಕು ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>