ಸೀಟು ಹಂಚಿಕೆ ಕುರಿತ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ‘12 ಸೀಟುಗಳು ಬೇಕು ಎಂದು ಸಚಿವ ರೇವಣ್ಣ ಹೇಳಿಕೆ ನೀಡಿದ್ದಾರೆ. ಸೀಟು ಹಂಚಿಕೆ ಕುರಿತು ದೇವೇಗೌಡರೊಂದಿಗೆ ಚರ್ಚೆ ನಡೆಸಲಾಗುವುದು. ಇದೊಂದು ಸಮ್ಮಿಶ್ರ ಸರ್ಕಾರವಾಗಿದ್ದು, ಇಲ್ಲಿ ಭಿಕ್ಷೆಯ ಪ್ರಶ್ನೆ ಬರುವುದಿಲ್ಲ. ಕಾಂಗ್ರೆಸ್ ಚುನಾವಣಾ ಸಮಿತಿಯ ಒಂದು ಸಭೆ ಮಾತ್ರ ನಡೆದಿದೆ. ಪರಸ್ಪರ ಮಾತುಕತೆಮೂಲಕ ಸೌಹಾರ್ದಯುತವಾಗಿ ಸೀಟು ಹಂಚಿಕೆ ನಡೆಯಲಿದೆ’ ಎಂದರು.