ಹಾವೇರಿ: ಸಿದ್ದರಾಮಯ್ಯ ಮಾಜಿ ಸಿಎಂ ಆಗಿದ್ದವರು. ಗೌರವಾನ್ವಿತವಾಗಿ ಮಾತನಾಡೋದು ಕಲಿಯಬೇಕು. ನಮ್ಮ ನಾಲಿಗೆ ನಮ್ಮ ಸಂಸ್ಕೃತಿ ತೋರಿಸುತ್ತದೆ. ಅವರು ಗೌರವಯುತವಾಗಿ ಮಾತನಾಡಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಹಿರೇಕೆರೂರಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದರಿದ್ರ ಸರ್ಕಾರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.
ಮೋದಿ ಆಡಳಿತದಲ್ಲಿ ಆರ್ ಬಿಐ ದಿವಾಳಿ ಆಗಿದೆ ಎಂಬ ದೇವೇಗೌಡರ ಹೇಳಿಕೆ ಸರಿಯಲ್ಲ. ಕರೋನಾ ವೈರಸ್ ಭೀತಿಯಿಂದ ಜಗತ್ತಿನ ಅರ್ಥ ವ್ಯವಸ್ಥೆ ಕುಸಿದಿದೆ ಎಂದು ಹೇಳಿದರು.