ಕಾಂಗ್ರೆಸ್ ಗೆಲುವಿಗೆ ಸಹಕಾರಿ ಆಗಬಹುದಾಗಿದ್ದ ಕೆಲ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು; ಮಂಡ್ಯದಲ್ಲಿ ಜೆಡಿಎಸ್ ಬೆಂಬಲಿಸುವ ಬದಲು ಸುಮಲತಾ ಅವರಿಗೆ ಪಕ್ಷದಿಂದ ಟಿಕೆಟ್ ನೀಡಬೇಕಾಗಿದ್ದುದು, ತುಮಕೂರಿನಲ್ಲಿ ಸಂಸದರಾಗಿದ್ದ ಎಸ್.ಪಿ.ಮುದ್ದಹನುಮೇಗೌಡ ಅವರಿಗೆ ಟಿಕೆಟ್ ಕೊಡದಿರುವುದು, ಕೊನೆ ಗಳಿಗೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಲು ಎಚ್.ಡಿ.ದೇವೇಗೌಡ ನಿರ್ಧರಿಸಿದ್ದು ಇಂತಹ ಸಾಕಷ್ಟು ಗೊಂದಲಗಳಿಂದಾಗಿ ಪಕ್ಷದ ಅಭ್ಯರ್ಥಿಗಳು ಸೋತಿದ್ದಾರೆ ಎಂದು ಸಿದ್ದರಾಮಯ್ಯ ವಿವರಿಸಿದರು ಎಂದು ಗೊತ್ತಾಗಿದೆ.