ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ, 'ಸದ್ಯ ನಾನು ರಾಜಕೀಯ ಬೆಳವಣಿಗೆಗಳಿಂದ ದೂರ ಉಳಿದಿದ್ದೇನೆ. ನನ್ನ ಭವಿಷ್ಯವೇ ಗೊತ್ತಿಲ್ಲ, ಇನ್ನು ಸಮ್ಮಿಶ್ರ ಸರ್ಕಾರದ ಭವಿಷ್ಯ ಹೇಗೆ ಹೇಳಲಿ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹಾಕುವ ಬಗ್ಗೆ ಆಯಾ ಪಕ್ಷಗಳ ಅಧ್ಯಕ್ಷರು ತೀರ್ಮಾನಿಸುತ್ತಾರೆ. ಕೇಂದ್ರ ಸರ್ಕಾರ ಸಮರ್ಪಕ ಬಜೆಟ್ ಕೊಟ್ಟಿದೆ' ಎಂದು ಹೇಳಿದರು.