ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಹೊಂದಿಕೊಂಡಂತೆ ಇರುವ ‘ಕಾವೇರಿ’ಗೆ ತಮ್ಮ ವಾಸ್ತವ್ಯ ಬದಲಿಸಲು ಮುಂದಾಗಿದ್ದ ಯಡಿಯೂರಪ್ಪ, ಅದನ್ನು ತಮಗೆ ಹಂಚಿಕೆ ಮಾಡಿಕೊಂಡಿ
ದ್ದರು. ಸಿದ್ದರಾಮಯ್ಯ ಅವರಿಗೆ ಕುಮಾರಕೃಪಾ–1 ಅನ್ನು ಹಂಚಿಕೆ ಮಾಡಿದ್ದರು. ಆದರೆ, ಸಿದ್ದರಾಮಯ್ಯ ಅವರು ‘ಕಾವೇರಿ’ ತೆರವು ಮಾಡಿರಲಿಲ್ಲ. ಮುಖ್ಯಮಂತ್ರಿಗೆ ಮನೆ ಬಿಟ್ಟುಕೊಡದ ಸಿದ್ದರಾಮಯ್ಯ ಎಂದು ಬಿಜೆಪಿ ನಾಯಕರು ಟೀಕೆ ಮಾಡಿದ್ದರು. ಇದು ಆರೋಪ–ಪ್ರತ್ಯಾರೋಪಕ್ಕೂ ಕಾರಣವಾಗಿತ್ತು. ಬುಧವಾರ (ಜ.29) ‘ಕಾವೇರಿ’ ತೊರೆದ ಸಿದ್ದರಾಮಯ್ಯ ತಮಗೆ ಹಂಚಿಕೆಯಾದ ಮನೆಗೆ ಅಧಿಕೃತವಾಗಿ ಸ್ಥಳಾಂತರ
ಗೊಂಡಿದ್ದಾರೆ.