<p><strong>ಬೆಂಗಳೂರು: </strong>ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.</p>.<p>‘ಕೊರೊನಾ ಬಂದಾಗಿನಿಂದ ಮನೆಯಿಂದ ಮೋದಿ ಹೊರಬಂದಿಲ್ಲ. ಇಂತವರಿಂದ ತ್ಯಾಗ, ಬಲಿದಾನ ಸಾಧ್ಯನಾ?. ದೇಶದಿಂದ ಬಿಜೆಪಿ ಕಿತ್ತೊಗೆಯಲು ಇನ್ನೊಂದು ಸ್ವಾತಂತ್ರ್ಯ ಹೋರಾಟ ನಡೆಯಬೇಕಿದೆ’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>‘ಬಿಜೆಪಿಯವರು ದುಡ್ಡು ಖರ್ಚು ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಇಲಾಖೆಗಳಿಂದ ಹಣ ಸಂಗ್ರಹಿಸಲು ಹೊರಟಿದ್ದಾರೆ. ದುಡ್ಡು ಕೊಟ್ಟು ಅನುದಾನ ಹಾಕಿಸಿಕೊಳ್ಳಬೇಕಾಗಿದೆ. ಶಾಸಕರಿಗೆ ಇದು ಬಿಟ್ಟು ಬೇರೆ ವಿಧಿಯಿಲ್ಲ’ ಎಂದು ಆರೋಪಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ದೇಶ ಹಾಳು ಮಾಡಲು ಕೆಟ್ಟ ಕಾರ್ಯಕ್ರಮ ಹಾಕಿಕೊಳ್ಳುತ್ತಿದ್ದಾರೆ’ ಎಂದು ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.</p>.<p>‘ಬಿಜೆಪಿಯವರು ಸುಳ್ಳು ಹೇಳಿ ಪಕ್ಷದ ಸಂಘಟನೆ ಮಾಡುತ್ತಿದ್ದಾರೆ. ಇದರ ಹಿಂದೆ ಆರ್ಎಸ್ಎಸ್ ಇದೆ. ಎಲ್ಲಿಯವರೆಗೆ ಮೋದಿ ಅವರು ಆರ್ಎಸ್ಎಸ್ ಅನ್ನು ಹತ್ತಿಕ್ಕುವುದಿಲ್ಲವೋ ಅಲ್ಲಿವರೆಗೂ ದೇಶದ ಯುವಕರಿಗೆ ಭವಿಷ್ಯವಿಲ್ಲ’ ಎಂದರು.</p>.<p>‘ಪಿಎಂ ಕೇರ್ಸ್ ಫಂಡ್ಗೆ ಚೀನಾದಿಂದಲೂ ಹಣ ಪಡೆದಿದ್ದಾರೆ. ಗಡಿಯಲ್ಲಿ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ. ಅವರ ಬಗ್ಗೆ ಪ್ರಧಾನಿ ಸತ್ಯ ಹೇಳುತ್ತಿಲ್ಲ’ ಎಂದು ದೂರಿದರು.</p>.<p><strong>ವೇಣುಗೋಪಾಲ್ ವಿಶ್ವಾಸ:</strong> ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ಪಕ್ಷಕ್ಕೆ ಕಷ್ಟ ಎದುರಾದಾಗಲೆಲ್ಲ ಸಮರ್ಥವಾಗಿ ಅದನ್ನು ನಿಭಾಯಿಸಿದವರು ಶಿವಕುಮಾರ್. ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಲು ಅವರಿಗೆ ಹೊಣೆಗಾರಿಕೆ ನೀಡಲಾಗಿದ್ದು, ಪಕ್ಷ ಮತ್ತೆ ಅಧಿಕಾರ ಗಳಿಸುವ ವಿಶ್ವಾಸವಿದೆ’ ಎಂದರು.</p>.<p>ಡಿ.ಕೆ.ಶಿವಕುಮಾರ್ ಅವರ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಈಶ್ವರ ಖಂಡ್ರೆ ಮತ್ತು ಸತೀಶ ಜಾರಕಿಹೊಳಿ ಅವರೂ ಪದಗ್ರಹಣ ಮಾಡಿದರು.</p>.<p><strong>ಮೈತ್ರಿಯಿಂದಾಗಿ ಸೋಲು: ದಿನೇಶ್</strong><br />‘ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿಕೊಂಡಿದ್ದರಿಂಲೇ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲು ಉಂಟಾಯಿತು. ಇನ್ನು ಮುಂದೆ ಅಂತಹ ಯಾವ ಮೈತ್ರಿಯೂ ಇಲ್ಲದೆ ಪಕ್ಷವು ಒಗ್ಗಟ್ಟಿನಿಂದ ಮುನ್ನಡೆಯಲಿದೆ’ ಎಂದು ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.</p>.<p><strong>ಹಿರಿಯರ ಮಾತಿಗೆ ಕಟ್ಟುಬಿದ್ದಿದ್ದೆ: </strong>ದಿನೇಶ್ ಮಾತಿಗೆ ಪರೋಕ್ಷವಾಗಿ ಸಮ್ಮತಿ ಸೂಚಿಸಿದ ಶಿವಕುಮಾರ್, ‘ಪಕ್ಷದ ಹಿರಿಯರ ಮಾತಿಗೆ ಕಟ್ಟುಬಿದ್ದು ಮೈತ್ರಿಯನ್ನು ಒಪ್ಪಿಕೊಂಡಿದ್ದೆ. ಹಲವರು ಪಕ್ಷಕ್ಕೆ ದ್ರೋಹ ಬಗೆದಾಗಲೂ ಮೈತ್ರಿ ಉಳಿಸಲು ಪ್ರಯತ್ನಪಟ್ಟಿದ್ದೆ’ಎಂದರು.</p>.<p><strong>ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ</strong><br />ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಂದರ್ಭವನ್ನು ಪಕ್ಷದ ಕಾರ್ಯಕರ್ತರು ಹಬ್ಬದಂತೆ ಆಚರಿಸಿದರು. ಕಾರ್ಯಕರ್ತರಲ್ಲದೆ, ಲಕ್ಷಾಂತರ ಜನ ಮನೆಯಲ್ಲಿಯೇ ಕುಳಿತು ಡಿಜಿಟಲ್ ಮಾಧ್ಯಮಗಳ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸಿದರು.</p>.<p>ನಗರದ ಬೀದಿ–ಬೀದಿಗಳಲ್ಲಿ ಕಾಂಗ್ರೆಸ್ ಬಾವುಟಗಳು, ಭಿತ್ತಿಪತ್ರಗಳು ರಾರಾಜಿಸಿದವು. ಬಿಬಿಎಂಪಿಯ ಕಾಂಗ್ರೆಸ್ ಸದಸ್ಯರು ತಮ್ಮ ವಾರ್ಡ್ಗಳಲ್ಲಿ, ಎಲ್ಇಡಿ ಪರದೆಗಳನ್ನು ಹಾಕಿ ಹಾಗೂ ಕೆಲವೆಡೆ ಟಿವಿಗಳನ್ನು ಅಳವಡಿಸುವ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಿದ್ದರು.ಶಿವಕುಮಾರ್ ಅವರ ಸಾಧನೆಗಳನ್ನು ಬಿಂಬಿಸುವ ಆಡಿಯೊ–ವಿಡಿಯೊಗಳನ್ನು ಪ್ರದರ್ಶಿಸಲಾಯಿತು.</p>.<p>ರಾಜ್ಯದ 7,800ಕ್ಕೂ ಹೆಚ್ಚು ಸ್ಥಳಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಲು ಅನುಕೂಲ ಕಲ್ಪಿಸಲಾಗಿತ್ತು. ಡಿಜಿಟಲ್ ಮತ್ತು ಝೂಮ್ ಮೂಲಕ ಲಕ್ಷಾಂತರ ಜನ ‘ಪ್ರತಿಜ್ಞಾ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p>.<p><strong>ಕಾರ್ಯಕ್ರಮದ ಅಚ್ಚುಕಟ್ಟು ವ್ಯವಸ್ಥೆ</strong><br />ಪದಗ್ರಹಣ ಸಮಾರಂಭವು ಅಚ್ಚುಕಟ್ಟಾಗಿ ನಡೆಯಿತು. ವೇದಿಕೆಯಲ್ಲಿ ಗುಂಪು–ಗುಂಪಾಗಿ ನಾಯಕರು ಬರುವುದನ್ನು ತಪ್ಪಿಸಿ, ತಂಡಗಳಲ್ಲಿ ಬರುವುದಕ್ಕೆ ಅವಕಾಶ ಕಲ್ಪಿಸಲಾಯಿತು.</p>.<p>ಹಾರ, ತುರಾಯಿಗೆ ಅವಕಾಶ ಇರಲಿಲ್ಲ. ವೇದಿಕೆಯಲ್ಲೂ ಯಾರಿಗೂ ಕುಳಿತುಕೊಳ್ಳಲು ಅವಕಾಶವಿರಲಿಲ್ಲ, ವೇದಿಕೆ ಮುಂಭಾಗವೇ ಆಸನದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>**<br />ಮೋದಿ ಏನು ಮಾತನಾಡಿದರೂ ಯುವಕರು ಚಪ್ಪಾಳೆ ಹೊಡೆಯುತ್ತಾರೆ. ತಂತ್ರಜ್ಞಾನ ಬಳಸಿಕೊಂಡು ಬಿಜೆಪಿಯ ದ್ವೇಷ ರಾಜಕಾರಣವನ್ನು ಹತ್ತಿಕ್ಕುವ ಪ್ರಯತ್ನ ಆಗಬೇಕು.<br /><em><strong>–ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಸದಸ್ಯ</strong></em></p>.<p>**<br />ಪಕ್ಷದಲ್ಲಿ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಜವಾಬ್ದಾರಿ ನಿಮ್ಮ ಮೇಲಿದ್ದು, ನೀವು ಇದನ್ನು ಮಾಡುವ ವಿಶ್ವಾಸ ನನಗಿದೆ. ನಿಮಗೆ ಶುಭವಾಗಲಿ.<br /><em><strong>–ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ</strong></em></p>.<p>**<br />ಅತ್ಯಂತ ಸಂಕೀರ್ಣ ಪರಿಸ್ಥಿತಿಯಲ್ಲಿ ಪಕ್ಷದ ಜವಾಬ್ದಾರಿ ವಹಿಸಿಕೊಂಡಿದ್ದೀರಿ. ಎಂತಹ ಕಠಿಣ ಪರಿಸ್ಥಿತಿ ಬಂದರೂ ನಾವು ನಿಮ್ಮ ಜತೆಗೆ ನಿಲ್ಲುತ್ತೇವೆ. ಧೈರ್ಯದಿಂದ ಮುನ್ನುಗ್ಗಿ.<br /><em><strong>–ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ನಾಯಕಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.</p>.<p>‘ಕೊರೊನಾ ಬಂದಾಗಿನಿಂದ ಮನೆಯಿಂದ ಮೋದಿ ಹೊರಬಂದಿಲ್ಲ. ಇಂತವರಿಂದ ತ್ಯಾಗ, ಬಲಿದಾನ ಸಾಧ್ಯನಾ?. ದೇಶದಿಂದ ಬಿಜೆಪಿ ಕಿತ್ತೊಗೆಯಲು ಇನ್ನೊಂದು ಸ್ವಾತಂತ್ರ್ಯ ಹೋರಾಟ ನಡೆಯಬೇಕಿದೆ’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>‘ಬಿಜೆಪಿಯವರು ದುಡ್ಡು ಖರ್ಚು ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಇಲಾಖೆಗಳಿಂದ ಹಣ ಸಂಗ್ರಹಿಸಲು ಹೊರಟಿದ್ದಾರೆ. ದುಡ್ಡು ಕೊಟ್ಟು ಅನುದಾನ ಹಾಕಿಸಿಕೊಳ್ಳಬೇಕಾಗಿದೆ. ಶಾಸಕರಿಗೆ ಇದು ಬಿಟ್ಟು ಬೇರೆ ವಿಧಿಯಿಲ್ಲ’ ಎಂದು ಆರೋಪಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ದೇಶ ಹಾಳು ಮಾಡಲು ಕೆಟ್ಟ ಕಾರ್ಯಕ್ರಮ ಹಾಕಿಕೊಳ್ಳುತ್ತಿದ್ದಾರೆ’ ಎಂದು ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.</p>.<p>‘ಬಿಜೆಪಿಯವರು ಸುಳ್ಳು ಹೇಳಿ ಪಕ್ಷದ ಸಂಘಟನೆ ಮಾಡುತ್ತಿದ್ದಾರೆ. ಇದರ ಹಿಂದೆ ಆರ್ಎಸ್ಎಸ್ ಇದೆ. ಎಲ್ಲಿಯವರೆಗೆ ಮೋದಿ ಅವರು ಆರ್ಎಸ್ಎಸ್ ಅನ್ನು ಹತ್ತಿಕ್ಕುವುದಿಲ್ಲವೋ ಅಲ್ಲಿವರೆಗೂ ದೇಶದ ಯುವಕರಿಗೆ ಭವಿಷ್ಯವಿಲ್ಲ’ ಎಂದರು.</p>.<p>‘ಪಿಎಂ ಕೇರ್ಸ್ ಫಂಡ್ಗೆ ಚೀನಾದಿಂದಲೂ ಹಣ ಪಡೆದಿದ್ದಾರೆ. ಗಡಿಯಲ್ಲಿ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ. ಅವರ ಬಗ್ಗೆ ಪ್ರಧಾನಿ ಸತ್ಯ ಹೇಳುತ್ತಿಲ್ಲ’ ಎಂದು ದೂರಿದರು.</p>.<p><strong>ವೇಣುಗೋಪಾಲ್ ವಿಶ್ವಾಸ:</strong> ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ಪಕ್ಷಕ್ಕೆ ಕಷ್ಟ ಎದುರಾದಾಗಲೆಲ್ಲ ಸಮರ್ಥವಾಗಿ ಅದನ್ನು ನಿಭಾಯಿಸಿದವರು ಶಿವಕುಮಾರ್. ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಲು ಅವರಿಗೆ ಹೊಣೆಗಾರಿಕೆ ನೀಡಲಾಗಿದ್ದು, ಪಕ್ಷ ಮತ್ತೆ ಅಧಿಕಾರ ಗಳಿಸುವ ವಿಶ್ವಾಸವಿದೆ’ ಎಂದರು.</p>.<p>ಡಿ.ಕೆ.ಶಿವಕುಮಾರ್ ಅವರ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಈಶ್ವರ ಖಂಡ್ರೆ ಮತ್ತು ಸತೀಶ ಜಾರಕಿಹೊಳಿ ಅವರೂ ಪದಗ್ರಹಣ ಮಾಡಿದರು.</p>.<p><strong>ಮೈತ್ರಿಯಿಂದಾಗಿ ಸೋಲು: ದಿನೇಶ್</strong><br />‘ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿಕೊಂಡಿದ್ದರಿಂಲೇ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲು ಉಂಟಾಯಿತು. ಇನ್ನು ಮುಂದೆ ಅಂತಹ ಯಾವ ಮೈತ್ರಿಯೂ ಇಲ್ಲದೆ ಪಕ್ಷವು ಒಗ್ಗಟ್ಟಿನಿಂದ ಮುನ್ನಡೆಯಲಿದೆ’ ಎಂದು ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.</p>.<p><strong>ಹಿರಿಯರ ಮಾತಿಗೆ ಕಟ್ಟುಬಿದ್ದಿದ್ದೆ: </strong>ದಿನೇಶ್ ಮಾತಿಗೆ ಪರೋಕ್ಷವಾಗಿ ಸಮ್ಮತಿ ಸೂಚಿಸಿದ ಶಿವಕುಮಾರ್, ‘ಪಕ್ಷದ ಹಿರಿಯರ ಮಾತಿಗೆ ಕಟ್ಟುಬಿದ್ದು ಮೈತ್ರಿಯನ್ನು ಒಪ್ಪಿಕೊಂಡಿದ್ದೆ. ಹಲವರು ಪಕ್ಷಕ್ಕೆ ದ್ರೋಹ ಬಗೆದಾಗಲೂ ಮೈತ್ರಿ ಉಳಿಸಲು ಪ್ರಯತ್ನಪಟ್ಟಿದ್ದೆ’ಎಂದರು.</p>.<p><strong>ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ</strong><br />ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಂದರ್ಭವನ್ನು ಪಕ್ಷದ ಕಾರ್ಯಕರ್ತರು ಹಬ್ಬದಂತೆ ಆಚರಿಸಿದರು. ಕಾರ್ಯಕರ್ತರಲ್ಲದೆ, ಲಕ್ಷಾಂತರ ಜನ ಮನೆಯಲ್ಲಿಯೇ ಕುಳಿತು ಡಿಜಿಟಲ್ ಮಾಧ್ಯಮಗಳ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸಿದರು.</p>.<p>ನಗರದ ಬೀದಿ–ಬೀದಿಗಳಲ್ಲಿ ಕಾಂಗ್ರೆಸ್ ಬಾವುಟಗಳು, ಭಿತ್ತಿಪತ್ರಗಳು ರಾರಾಜಿಸಿದವು. ಬಿಬಿಎಂಪಿಯ ಕಾಂಗ್ರೆಸ್ ಸದಸ್ಯರು ತಮ್ಮ ವಾರ್ಡ್ಗಳಲ್ಲಿ, ಎಲ್ಇಡಿ ಪರದೆಗಳನ್ನು ಹಾಕಿ ಹಾಗೂ ಕೆಲವೆಡೆ ಟಿವಿಗಳನ್ನು ಅಳವಡಿಸುವ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಿದ್ದರು.ಶಿವಕುಮಾರ್ ಅವರ ಸಾಧನೆಗಳನ್ನು ಬಿಂಬಿಸುವ ಆಡಿಯೊ–ವಿಡಿಯೊಗಳನ್ನು ಪ್ರದರ್ಶಿಸಲಾಯಿತು.</p>.<p>ರಾಜ್ಯದ 7,800ಕ್ಕೂ ಹೆಚ್ಚು ಸ್ಥಳಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಲು ಅನುಕೂಲ ಕಲ್ಪಿಸಲಾಗಿತ್ತು. ಡಿಜಿಟಲ್ ಮತ್ತು ಝೂಮ್ ಮೂಲಕ ಲಕ್ಷಾಂತರ ಜನ ‘ಪ್ರತಿಜ್ಞಾ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p>.<p><strong>ಕಾರ್ಯಕ್ರಮದ ಅಚ್ಚುಕಟ್ಟು ವ್ಯವಸ್ಥೆ</strong><br />ಪದಗ್ರಹಣ ಸಮಾರಂಭವು ಅಚ್ಚುಕಟ್ಟಾಗಿ ನಡೆಯಿತು. ವೇದಿಕೆಯಲ್ಲಿ ಗುಂಪು–ಗುಂಪಾಗಿ ನಾಯಕರು ಬರುವುದನ್ನು ತಪ್ಪಿಸಿ, ತಂಡಗಳಲ್ಲಿ ಬರುವುದಕ್ಕೆ ಅವಕಾಶ ಕಲ್ಪಿಸಲಾಯಿತು.</p>.<p>ಹಾರ, ತುರಾಯಿಗೆ ಅವಕಾಶ ಇರಲಿಲ್ಲ. ವೇದಿಕೆಯಲ್ಲೂ ಯಾರಿಗೂ ಕುಳಿತುಕೊಳ್ಳಲು ಅವಕಾಶವಿರಲಿಲ್ಲ, ವೇದಿಕೆ ಮುಂಭಾಗವೇ ಆಸನದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>**<br />ಮೋದಿ ಏನು ಮಾತನಾಡಿದರೂ ಯುವಕರು ಚಪ್ಪಾಳೆ ಹೊಡೆಯುತ್ತಾರೆ. ತಂತ್ರಜ್ಞಾನ ಬಳಸಿಕೊಂಡು ಬಿಜೆಪಿಯ ದ್ವೇಷ ರಾಜಕಾರಣವನ್ನು ಹತ್ತಿಕ್ಕುವ ಪ್ರಯತ್ನ ಆಗಬೇಕು.<br /><em><strong>–ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಸದಸ್ಯ</strong></em></p>.<p>**<br />ಪಕ್ಷದಲ್ಲಿ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಜವಾಬ್ದಾರಿ ನಿಮ್ಮ ಮೇಲಿದ್ದು, ನೀವು ಇದನ್ನು ಮಾಡುವ ವಿಶ್ವಾಸ ನನಗಿದೆ. ನಿಮಗೆ ಶುಭವಾಗಲಿ.<br /><em><strong>–ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ</strong></em></p>.<p>**<br />ಅತ್ಯಂತ ಸಂಕೀರ್ಣ ಪರಿಸ್ಥಿತಿಯಲ್ಲಿ ಪಕ್ಷದ ಜವಾಬ್ದಾರಿ ವಹಿಸಿಕೊಂಡಿದ್ದೀರಿ. ಎಂತಹ ಕಠಿಣ ಪರಿಸ್ಥಿತಿ ಬಂದರೂ ನಾವು ನಿಮ್ಮ ಜತೆಗೆ ನಿಲ್ಲುತ್ತೇವೆ. ಧೈರ್ಯದಿಂದ ಮುನ್ನುಗ್ಗಿ.<br /><em><strong>–ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ನಾಯಕಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>