ಮಲ್ಲೇಶ್ವರದ ವೆಗಾಸ್ ಆಸ್ಪತ್ರೆಯಲ್ಲಿ ಹೃದಯದ ಶಸ್ತ್ರ ಚಿಕಿತ್ಸೆಯ ನಂತರ ಚೇತರಿಸಿಕೊಂಡು ಮನೆಗೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ನನ್ನ ಆರೋಗ್ಯ ಸುಧಾರಿಸಲಿ ಎಂದು ಅಭಿಮಾನಿಗಳು ರಾಜ್ಯದ ಹಲವೆಡೆ ಪೂಜೆ ಮಾಡಿಸಿ, ಪ್ರಸಾದ ಕಳಿಸಿದ್ದರು. ಅವರಿಗೂ ಧನ್ಯವಾದ ಅರ್ಪಿಸುತ್ತೇನೆ’ ಎಂದು ನುಡಿದರು.