ಸಿದ್ಧಾರ್ಥ ಹೆಗ್ಡೆ ತಮ್ಮ ಕಂಪನಿಯ ಆಡಳಿತ ಮಂಡಳಿ ನಿರ್ದೇಶಕರಿಗೆ ಬರೆದಿದ್ದಾರೆ ಎನ್ನಲಾದ ಪತ್ರದ ಖಚಿತತೆಯನ್ನು ದೃಢಪಡಿಸಿಕೊಳ್ಳುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ತನಿಖೆಗಾಗಿ ಬೆಂಗಳೂರಿಗೆ ತೆರಳಿರುವ ಒಂದು ತಂಡ, ಈಗಾಗಲೇ ಕೆಫೆ ಕಾಫಿ ಡೇ ಕಚೇರಿಗೆ ಭೇಟಿ ನೀಡಿದ್ದು, ಮಾಹಿತಿ ಸಂಗ್ರಹಿಸಿದೆ. ಜತೆಗೆ ಸಂಸ್ಥೆಯ ಕೆಲವು ಅಧಿಕಾರಿಗಳು ವಿದೇಶಕ್ಕೆ ತೆರಳಿದ್ದು, ಅವರ ಹೇಳಿಕೆಗಳನ್ನು ಪಡೆದ ಬಳಿಕವೇ ಪತ್ರದ ಖಚಿತತೆಯ ಕುರಿತು ಸ್ಪಷ್ಟತೆ ಸಿಗಲಿದೆ ಎಂದರು.