ಮಡಿಕೇರಿ: ‘ಮೈತ್ರಿ’ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಮೀಪದ ‘ಇಬ್ಬನಿ ರೆಸಾರ್ಟ್’ನಲ್ಲಿ ವಾಸ್ತವ್ಯ ಹೂಡಿದ್ದು ವಿಶ್ರಾಂತಿ ಮೊರೆ ಹೋಗಿದ್ದಾರೆ.
ಮಡಿಕೇರಿ–ಮೈಸೂರು ರಸ್ತೆಯಲ್ಲಿ ಹಸಿರಿನ ಕಾಫಿ ತೋಟದ ನಡುವೆ ಇರುವ ಈ ರೆಸಾರ್ಟ್ಗೆ ತಮ್ಮ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ ಜತೆಗೆ ಭಾನುವಾರ ಬಂದಿರುವ ಅವರು ಎರಡು ದಿನಗಳಿಂದ ರಾಜಕೀಯ ಒತ್ತಡ ಹಾಗೂ ವಿಧಾನಸಭೆ ಉಪ ಚುನಾವಣೆ ಪ್ರಚಾರದಿಂದ ದೂರು ಉಳಿದು ರಿಲ್ಯಾಕ್ಸ್ನಲ್ಲಿದ್ದಾರೆ.
ರೆಸಾರ್ಟ್ನಿಂದ ಹೊರಬಂದಿಲ್ಲ. ಸ್ಥಳೀಯ ಕಾಂಗ್ರೆಸ್ ಮುಖಂಡರಿಗೂ ವಾಸ್ತವ್ಯದ ಮಾಹಿತಿ ನೀಡಿಲ್ಲ. ‘ಇದು ಅವರ ಖಾಸಗಿ ಭೇಟಿಯಾಗಿರುವ ಕಾರಣ ನಾವು ರೆಸಾರ್ಟ್ಗೆ ತೆರಳುತ್ತಿಲ್ಲ’ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ. ಆದರೆ, ಸಿದ್ದರಾಮಯ್ಯ ಅವರ ಆತ್ಮೀಯರು ಕೊಡಗಿನಲ್ಲಿದ್ದು ಅವರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಮೈಸೂರಿನಿಂದಲೇ ಅವರ ಬೆಂಬಲಿಗರು ಎರಡು ಕೊಠಡಿ ಬುಕ್ ಮಾಡಿದ್ದರು ಎನ್ನಲಾಗಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಉಡುಪಿ ರೆಸಾರ್ಟ್ ವಾಸ್ತವ್ಯದ ಬಳಿಕ ಸಿದ್ದರಾಮಯ್ಯ ರೆಸಾರ್ಟ್ ವಾಸ್ತವ್ಯ ಕುತೂಹಲ ಮೂಡಿಸಿದೆ. ಮಂಗಳವಾರ ಬೆಳಿಗ್ಗೆ ಮೈಸೂರಿಗೆ ತೆರಳುವ ಸಾಧ್ಯತೆಯಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.