ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ ಗೆಲುವು : 63 ಕೆ.ಜಿ. ಬೆಳ್ಳಿ ಗಟ್ಟಿ ದೇಣಿಗೆ ನೀಡಿದ ಆನಂದ್‌ ಸಿಂಗ್‌

Last Updated 9 ಡಿಸೆಂಬರ್ 2019, 14:50 IST
ಅಕ್ಷರ ಗಾತ್ರ

ಹೊಸಪೇಟೆ: ವಿಜಯನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಬಿಜೆಪಿಯ ಆನಂದ್‌ ಸಿಂಗ್‌ ಅವರು ಇಲ್ಲಿನ ಕೇರಿಗಳ ದೇವಸ್ಥಾನಗಳಿಗೆ ತೆರಳಿ ಪ್ರತಿ ದೇಗುಲಕ್ಕೆ ತಲಾ 9 ಕೆ.ಜಿ. ಬೆಳ್ಳಿ ಗಟ್ಟಿಗಳನ್ನು ದೇಣಿಗೆ ರೂಪದಲ್ಲಿ ನೀಡಿದರು.

ತಳವಾರ ಕೇರಿಯ ದುರುಗಮ್ಮ ದೇವಿ, ಬಾಣದಕೇರಿಯ ನಿಜಲಿಂಗಮ್ಮ ದೇವಿ, ಚಿತ್ರಕೇರಿಯ ತಾಯಮ್ಮ, ಉಕ್ಕಡಕೇರಿಯ ಹುಲಿಗೆಮ್ಮ ಹಾಗೂ ಜಲದುರ್ಗಮ್ಮ, ಮ್ಯಾಸಕೇರಿಯ ಹುಲಿಗೆಮ್ಮ, ಕೊಂಗಮ್ಮ ಹಾಗೂ ಕಲ್ಲಮ್ಮ ದೇವಿ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಬೆಳ್ಳಿ ಗಟ್ಟಿಗಳನ್ನು ಸಮರ್ಪಿಸಿದರು.

ಬೆಂಗಳೂರಿನ ಬಿಡದಿಯ ಈಗಲ್‌ಟನ್‌ ರೆಸಾರ್ಟಿನಲ್ಲಿ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಅವರಿಂದ ಹಲ್ಲೆಗೊಳಗಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದಾಗಲೂ ಸಿಂಗ್‌ ಎಲ್ಲಾ ದೇಗುಲಗಳಿಗೆ ತಲಾ 5 ಕೆ.ಜಿ. ಬೆಳ್ಳಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT