ರಾಜ್ಯವನ್ನು ಬರ ತೀವ್ರವಾಗಿ ಕಾಡುತ್ತಿದ್ದು, ಮತ್ತೊಂದೆಡೆ ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಾವಳಿ ಉಂಟಾಗಿದೆ. ರೈತರು ಸತತವಾಗಿ ಬರದಿಂದ ನಲುಗಿದ್ದು, ಸಂಕಷ್ಟದಲ್ಲಿ ಇರುವ ಈ ಸಮಯದಲ್ಲಿ ದಸರಾವನ್ನು ಸರಳವಾಗಿ ಆಚರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸರಳ, ಅದ್ದೂರಿ ಎನ್ನುವ ಬದಲು ಸಾಂಪ್ರದಾಯಿಕ ಆಚರಣೆ ಬಗ್ಗೆಯೂ ಚರ್ಚಿಸಿ, ನಿರ್ಧರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.