‘ಸರ್ಕಾರದ ನಿರ್ಧಾರದಿಂದ ಬೇಸತ್ತಿರುವ ಮಠಾಧೀಶರೇ ಬೀದಿಗೆ ಇಳಿದು ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಹಂಪಿ ಉತ್ಸವ ಆಚರಿಸಲು ಭಿಕ್ಷೆ ಯಾಚಿಸುತ್ತಿದ್ದಾರೆ. ಹಂಪಿ ಉತ್ಸವ ಆಚರಿಸಲು ಸ್ವಾಮೀಜಿಗಳು ಭಿಕ್ಷೆ ಬೇಡುತ್ತಿದ್ದಾರೆ ಎಂದರೇನು ಅರ್ಥ? ಸರ್ಕಾರ ನಡೆಸುತ್ತಿರುವವರು ಇಲ್ಲಿನ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಗತ ಕಾಲದ ಇತಿಹಾಸ ಕಡೆಗಣಿಸುತ್ತಿದ್ದಾರೆಂದೇ ಅರ್ಥವಲ್ಲವೇ ಎಂದು ರೆಡ್ಡಿ ಪ್ರಶ್ನಿಸಿದ್ದಾರೆ.