<p><strong>ವಿಜಯಪುರ:</strong> ‘ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ಎಲ್ರೂ ಒಂದೇ ಲಗ್ನವಾಗಬೇಕು. ಎರಡೇ ಮಕ್ಕಳನ್ನಷ್ಟೇ ಹೊಂದಬೇಕು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ನಗರದ ಸಿದ್ಧೇಶ್ವರ ಸಂಸ್ಥೆಯಿಂದ ಮಂಗಳವಾರ ಬಸವ ಜಯಂತಿ ಆಚರಣೆ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಯತ್ನಾಳ, ‘ಕಾಶ್ಮೀರಕ್ಕಿರುವ 370ನೇ ವಿಧಿಯನ್ನು ರದ್ದುಗೊಳಿಸಲಿದ್ದೇವೆ’ ಎಂದರು.</p>.<p>‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುತ್ತೇವೆ. ಇದೇ ರೀತಿ ಕಾಶಿ ವಿಶ್ವನಾಥ ಮಂದಿರ ಪಕ್ಕ ಸ್ವಚ್ಛಗೊಳಿಸಿ, ಪುನರ್ ನಿರ್ಮಾಣ ಕೈಗೊಳ್ಳಲಾಗುವುದು’ ಎಂದು ಯತ್ನಾಳ ಹೇಳಿದರು.</p>.<p>‘ರಾಜ್ಯ ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಬಳಿಕ ಡೈನಾಮಿಕ್ ಲೀಡರ್ ನಾನೇ. ಎಲ್ಲ ರೀತಿಯಿಂದಲೂ ಅರ್ಹನಿರುವೆ ಎಂಬುದು ರಾಷ್ಟ್ರೀಯ ಹೈಕಮಾಂಡ್ಗೂ ಗೊತ್ತಿದೆ. ಈ ಕುರಿತಂತೆ ಈಗಾಗಲೇ ವರಿಷ್ಠರೊಬ್ಬರು ಮಾಹಿತಿ ಪಡೆದಿದ್ದಾರೆ’ ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ಎಲ್ರೂ ಒಂದೇ ಲಗ್ನವಾಗಬೇಕು. ಎರಡೇ ಮಕ್ಕಳನ್ನಷ್ಟೇ ಹೊಂದಬೇಕು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ನಗರದ ಸಿದ್ಧೇಶ್ವರ ಸಂಸ್ಥೆಯಿಂದ ಮಂಗಳವಾರ ಬಸವ ಜಯಂತಿ ಆಚರಣೆ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಯತ್ನಾಳ, ‘ಕಾಶ್ಮೀರಕ್ಕಿರುವ 370ನೇ ವಿಧಿಯನ್ನು ರದ್ದುಗೊಳಿಸಲಿದ್ದೇವೆ’ ಎಂದರು.</p>.<p>‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುತ್ತೇವೆ. ಇದೇ ರೀತಿ ಕಾಶಿ ವಿಶ್ವನಾಥ ಮಂದಿರ ಪಕ್ಕ ಸ್ವಚ್ಛಗೊಳಿಸಿ, ಪುನರ್ ನಿರ್ಮಾಣ ಕೈಗೊಳ್ಳಲಾಗುವುದು’ ಎಂದು ಯತ್ನಾಳ ಹೇಳಿದರು.</p>.<p>‘ರಾಜ್ಯ ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಬಳಿಕ ಡೈನಾಮಿಕ್ ಲೀಡರ್ ನಾನೇ. ಎಲ್ಲ ರೀತಿಯಿಂದಲೂ ಅರ್ಹನಿರುವೆ ಎಂಬುದು ರಾಷ್ಟ್ರೀಯ ಹೈಕಮಾಂಡ್ಗೂ ಗೊತ್ತಿದೆ. ಈ ಕುರಿತಂತೆ ಈಗಾಗಲೇ ವರಿಷ್ಠರೊಬ್ಬರು ಮಾಹಿತಿ ಪಡೆದಿದ್ದಾರೆ’ ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>