ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಬಿಜೆಪಿಗೆ ಬಹುಮತ

Last Updated 3 ಸೆಪ್ಟೆಂಬರ್ 2018, 4:50 IST
ಅಕ್ಷರ ಗಾತ್ರ

ಶಿರಸಿ: ನಗರಸಭೆಯ 31 ವಾರ್ಡ್‌ಗಳ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಬಹುಮತ ಪಡೆದಿದೆ.

ಹಿರಿಯ ಸದಸ್ಯರಾದ ರಮೇಶ ಆಚಾರಿ, ಅರುಣ ಕೋಡ್ಕಣಿ, ರವಿ ಚಂದಾವರ, ಅರುಣ ಪ್ರಭು ಸೋಲು ಕಂಡಿದ್ದಾರೆ.

ಹಾಲಿ ಅಧ್ಯಕ್ಷ ಪ್ರದೀಪ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿದ್ದ ಉಪಾಧ್ಯಕ್ಷೆ ಅರುಣಾ ವೆರ್ಣೇಕರ್ ಸೋತಿದ್ದಾರೆ.

17ನೇ ವಾರ್ಡಿನ ಸದಸ್ಯ ಶ್ರೀಕಾಂತ ತಾರೀಬಾಗಿಲು ಸತತ 5ನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಆಡಳಿತದ ಚುಕ್ಕಾಣಿ ಹಿಡಿಯಲು ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ. ಪಕ್ಷೇತರರಾಗಿ ಆಯ್ಕೆಯಾದವರಲ್ಲಿ ಇಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿದ್ದಾರೆ.

ಬಿಜೆಪಿ- 17; ಕಾಂಗ್ರೆಸ್ - 9; ಜೆಡಿಎಸ್ - 01; ಪಕ್ಷೇತರ - 04

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT