ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಮದ್ಯದಂಗಡಿ ಬಂದ್ ಮಾಡಲಿ: ಕಾಗೇರಿ

Last Updated 15 ಅಕ್ಟೋಬರ್ 2018, 6:57 IST
ಅಕ್ಷರ ಗಾತ್ರ

ಶಿರಸಿ: ತಾಲ್ಲೂಕಿನ ಬಚಗಾಂವದಲ್ಲಿ ಎಂ.ಎಸ್.ಐ.ಎಲ್‌ ಮದ್ಯದಂಗಡಿ ಆರಂಭಿಸಿರುವುದನ್ನು ವಿರೋಧಿಸಿ ಗ್ರಾಮಸ್ಥರು, ಅಂಗಡಿ ಎದುರು ಧರಣಿ‌ ಕುಳಿತಿದ್ದಾರೆ.

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಅಂಗಡಿ ಬಂದ್ ಮಾಡುವ ಭರವಸೆ ನೀಡದ ವಿನಾ ಧರಣಿ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಶಾಸಕ‌ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಚಂದ್ರು ದೇವಾಡಿಗ, ಸ್ಥಳೀಯ ದೇವಾಲಯ ಸಮಿತಿ ಪ್ರಮುಖರು, ಮಸೀದಿ‌ ಪ್ರಮುಖರು, ಬಹು ಸಂಖ್ಯೆಯಲ್ಲಿ‌ ಮಹಿಳೆಯರು ಭಾಗವಹಿಸಿದ್ದಾರೆ.

ಮದ್ಯ ಮಾರಾಟ ಮಳಿಗೆ ಆರಂಭಿಸಲು ಸ್ಥಳೀಯ ಶಾಸಕರ ಅನುಮತಿ ಅಗತ್ಯ. ಆದರೆ, ಬಚಗಾಂವದಲ್ಲಿ ಈ ಮಳಿಗೆ ಪ್ರಾರಂಭಿಸುವ ಮೊದಲು ನನ್ನ ಗಮನಕ್ಕೆ ತಂದಿಲ್ಲ. ಮದ್ಯ ಮಾರಾಟದಿಂದ ಸರ್ಕಾರ ಆದಾಯದ ನಿರೀಕ್ಷಿಸುವುದು ಸರಿಯಲ್ಲ. ಎಲ್ಲದಕ್ಕೂ ಮೊಸಳೆ ಕಣ್ಣೀರು ಹಾಕುವ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಬಡವರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಮದ್ಯದಂಗಡಿ ಬಂದ್ ಮಾಡಲಿ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT