ಚುನಾವಣೆ ಗೆಲ್ಲುವುದಕ್ಕಾಗಿ ಮೋದಿ ನೋಟು ಅಮಾನ್ಯೀಕರಣ ಅಸ್ತ್ರವನ್ನು ಬಳಸುತ್ತಿದ್ದಾರೆ. ಆದರೆ ಅಮಾನ್ಯೀಕರಣದಿಂದ ದೇಶದ ಕೋಟ್ಯಂತರ ಜನರಿಗೆ ನಷ್ಟವಾಗಿದೆ. ಇದರಿಂದ ದೇಶ ಹಿಂದುಳಿದಿದೆ. ಲಕ್ಷಾಂತರ ಸಣ್ಣ ಕೈಗಾರಿಕೆಗಳು ಮುಚ್ಚಿ ಹೋಗಿವೆ. ಬಡವರು, ಕಾರ್ಮಿಕರು, ವ್ಯಾಪಾರಸ್ಥರು ನರಳುತ್ತಿದ್ದಾರೆ. ಇದು ರಫೆಲ್ಗಿಂತ ದೊಡ್ಡ ಹಗರಣವಾಗಿದೆ ಎಂದು ಟೀಕಿಸಿದರು.