ಅರ್ಜಿದಾರರ ಪರ ವಕೀಲ ಶ್ರೀನಿವಾಸ್ ವಾದ ಮಂಡಿಸಿ, ‘ಮೀನುಗಾರಿಕಾ ಸಚಿವರ ಪ್ರಭಾವಕ್ಕೆ ಒಳಗಾಗಿ ಹಾಗೂ ಕೆಲವು ಶಾಸಕರ ಮನವಿ ಮೇರೆಗೆ ಮುಖ್ಯಮಂತ್ರಿಗಳ ಸೂಚನೆಯಂತೆ ಮಾರ್ಗಸೂಚಿ ನಿಯಮಕ್ಕೆ ತಿದ್ದುಪಡಿ ಮಾಡಲಾಗಿದೆ. ಇದರಿಂದ ಈಗಾಗಲೇ ಮೀನುಗಾರಿಕೆ ಸೊಸೈಟಿಗಳಲ್ಲಿ ಇರುವ ಪರಿಶಿಷ್ಟ ಜಾತಿ, ಪಂಗಡ, ಕ್ರೈಸ್ತರು, ತಿಗಳರು, ಮುಸ್ಲಿಮರು ಮತ್ತು ಇತರೆ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗಲಿದೆ’ ಎಂದು ಆಕ್ಷೇಪಿಸಿದರು.