ಅಲ್ಲಿಂದ ಹೂಜುಗಲ್ಲಿಗೆ ತೆರಳಿ ಕಾರ್ಯಕ್ರಮ ಮುಗಿಸುವ ವೇಳೆ ಉರಿ ಕಾಣಿಸಿಕೊಂಡಿತ್ತು. ಕೂಡಲೇ ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಜಂತು ಯಾವುದು ಎಂಬುದನ್ನು ಖಚಿತಪಟ್ಟಿಲ್ಲ. ಹಾವು, ಅಥವಾ ವಿಷಜಂತು ಕಚ್ಚಿದೆಯೇ ಎಂಬ ಬಗ್ಗೆ ಮಾಹಿತಿ ತಿಳಿದಿಲ್ಲ. ‘ಜನತೆ ಆತಂಕ ಪಡುವ ಅಗತ್ಯವಿಲ್ಲ. ಶಾಸಕರು ಆರೋಗ್ಯವಾಗಿದ್ದಾರೆ’ ಎಂದು ಶಾಸಕರ ಆಪ್ತಕಾರ್ಯದರ್ಶಿ ತಿಳಿಸಿದರು.