2017ರಲ್ಲೂ ಜಿಲ್ಲಾಧಿಕಾರಿ, ಎಸ್ಪಿಗೆ ಕುಟುಂಬದವರು ಈ ಬಗ್ಗೆ ದೂರು ನೀಡಿದ್ದರು. ಆಗ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಂಧಾನ ನಡೆಸಿದ್ದರು. ಆದರೆ, ಕೆಲವೇ ದಿನಗಳಲ್ಲಿ ಗ್ರಾಮದ ಜನರು ನಮ್ಮೊಂದಿಗೆ ಆತ್ಮೀಯತೆ ಕಳೆದುಕೊಂಡರು. ನಮ್ಮೊಂದಿಗೆ ಸರಿಯಾಗಿ ಮಾತನಾಡುತ್ತಿಲ್ಲ. ಸಾಮಾಜಿಕವಾಗಿ ಬಹಿಷ್ಕರಿಸಿದಂತೆ ಮಾಡಿದ್ದಾರೆ ಎಂದು ದೂರಿದ್ದಾರೆ.