<p><strong>ಬೆಂಗಳೂರು: </strong>ಉತ್ತಮ ಬದುಕಿಗೆ ಸಮಾಜ ವಿಜ್ಞಾನದ ಸಂಶೋಧನೆ ಅಗತ್ಯ, ವಿಜ್ಞಾನ ಮತ್ತು ಸಮಾಜ ಜತೆ ಜತೆಯಾಗಿ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.</p>.<p>ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ಆರಂಭವಾದ 43ನೇ ಭಾರತೀಯ ಸಮಾಜ ವಿಜ್ಞಾನ ಕಾಂಗ್ರೆಸ್ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಇಂತಹ ಸಮಾವೇಶಗಳಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಜಾರಿಗೆ ತರುವ ಕೆಲಸ ಆಗಬೇಕು ಎಂದು ತಿಳಿಸಿದರು.</p>.<p>ಭಾರತೀಯ ಸಮಾಜ ವಿಜ್ಞಾನ ಅಕಾಡೆಮಿ ಸಹಯೋಗದಲ್ಲಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಈ ಸಮಾವೇಶ ಹಮ್ಮಿಕೊಂಡಿದೆ. ಹಿರಿಯ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೇ 21ರ ವರೆಗೆ ಸಮಾವೇಶ ನಡೆಯಲಿದ್ದು, 700 ಪ್ರಬಂಧಗಳನ್ನು ಮಂಡಿಸಲಾಗುತ್ತದೆ.</p>.<p><strong>ಸಿಎಂಗೆ ಅನಾರೋಗ್ಯ</strong><br />ಅನಾರೋಗ್ಯ ಕಾರಣ ಸಿಎಂ ಯಡಿಯೂರಪ್ಪಕಾರ್ಯಕ್ರಮಕ್ಕೆ ತಡವಾಗಿ ಬಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಉತ್ತಮ ಬದುಕಿಗೆ ಸಮಾಜ ವಿಜ್ಞಾನದ ಸಂಶೋಧನೆ ಅಗತ್ಯ, ವಿಜ್ಞಾನ ಮತ್ತು ಸಮಾಜ ಜತೆ ಜತೆಯಾಗಿ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.</p>.<p>ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ಆರಂಭವಾದ 43ನೇ ಭಾರತೀಯ ಸಮಾಜ ವಿಜ್ಞಾನ ಕಾಂಗ್ರೆಸ್ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಇಂತಹ ಸಮಾವೇಶಗಳಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಜಾರಿಗೆ ತರುವ ಕೆಲಸ ಆಗಬೇಕು ಎಂದು ತಿಳಿಸಿದರು.</p>.<p>ಭಾರತೀಯ ಸಮಾಜ ವಿಜ್ಞಾನ ಅಕಾಡೆಮಿ ಸಹಯೋಗದಲ್ಲಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಈ ಸಮಾವೇಶ ಹಮ್ಮಿಕೊಂಡಿದೆ. ಹಿರಿಯ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೇ 21ರ ವರೆಗೆ ಸಮಾವೇಶ ನಡೆಯಲಿದ್ದು, 700 ಪ್ರಬಂಧಗಳನ್ನು ಮಂಡಿಸಲಾಗುತ್ತದೆ.</p>.<p><strong>ಸಿಎಂಗೆ ಅನಾರೋಗ್ಯ</strong><br />ಅನಾರೋಗ್ಯ ಕಾರಣ ಸಿಎಂ ಯಡಿಯೂರಪ್ಪಕಾರ್ಯಕ್ರಮಕ್ಕೆ ತಡವಾಗಿ ಬಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>