ತಾಲ್ಲೂಕಿನ ಮೇಕೇರಿಯ ಶಕ್ತಿನಗರದ ನಿವಾಸಿ ನಳಿನಿ ಅವರಿಂದ ₹ 20 ಸಾವಿರ ಲಂಚ ಪಡೆಯುತ್ತಿದ್ದಾಗ ಎಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದರು. ದೌರ್ಜನ್ಯ ಪ್ರಕರಣದಲ್ಲಿ ನಳಿನಿ ಕುಟುಂಬಕ್ಕೆ ಸರ್ಕಾರದಿಂದ ₹ 4 ಲಕ್ಷ ಪರಿಹಾರ ಮಂಜೂರಾಗಿತ್ತು. ಅದರ ಚೆಕ್ ನೀಡಲು ಲಂಚ ಕೇಳಿದ್ದರು. ನಳಿನಿ ಅವರು ಮೊಬೈಲ್ ರೆಕಾರ್ಡ್ ಸಹಿತ ಎಸಿಬಿ ಪೊಲೀಸರಿಗೆ ದೂರು ಸಲ್ಲಿಸಿದ್ದರು.