ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಾದಕ್ಕೆ ಕಾರಣವಾದ ಎಸ್‌.ಪಿ ಪತ್ರ

Last Updated 25 ಮಾರ್ಚ್ 2019, 20:20 IST
ಅಕ್ಷರ ಗಾತ್ರ

ಮಂಡ್ಯ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪಾಲ್ಗೊಳ್ಳುವ ಜೆಡಿಎಸ್‌ ಸಮಾವೇಶದ ವೇಳೆ ವಿದ್ಯುತ್‌ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ್‌ ದೇವರಾಜ್‌ ಅವರು ಸೆಸ್ಕ್‌ ಅಧಿಕಾರಿಗಳಿಗೆ ಬರೆದಿರುವ ಪತ್ರ ವಿವಾದಕ್ಕೆ ಕಾರಣವಾಗಿದೆ.

ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ಸಮಾರಂಭದಲ್ಲಿ ಪಾಲ್ಗೊಂಡು ಸಂಜೆ ಬೆಂಗಳೂರಿಗೆ ವಾಪಸ್‌ ತೆರಳಲಿದ್ದಾರೆ. ಅವರು ಇರುವಾಗ ನಿರಂತರವಾಗಿ ವಿದ್ಯುತ್‌ ಪೂರೈಕೆ ಮಾಡಬೇಕು. ಈ ವೇಳೆ ವಿದ್ಯುತ್‌ ವ್ಯತ್ಯಯ ಉಂಟಾಗಬಾರದು. ಸೆಸ್ಕ್‌ ಹಿರಿಯ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು. ವಿದ್ಯುತ್‌ ಪೂರೈಕೆ ಮೇಲೆ ನಿಗಾ ಇಡಲು ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಬೇಕು. ಜೊತೆಗೆ ಪ್ರತ್ಯೇಕ ಜನರೇಟರ್‌ ವ್ಯವಸ್ಥೆಯನ್ನೂ ಮಾಡಬೇಕು ಎಂದು ಪತ್ರದಲ್ಲಿ ಸೂಚನೆ ನೀಡಿದ್ದಾರೆ.

ಈ ಕುರಿತು ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT