‘ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಜುಲೈ 29ರಂದೇ ವಿಶ್ವಾಸಮತ ಸಾಬೀತುಪಡಿಸಲು ಅಧಿವೇಶನ ಕರೆಯಬೇಕು ಎಂದು ಕೇಳಿಕೊಂಡಿದ್ದರು. ಅಧಿವೇಶನ ಕರೆಯಲು ಕಡಿಮೆ ಸಮಯ ಇದ್ದುದರಿಂದರಜೆ ದಿನವೂ ನನ್ನ ಕಚೇರಿಯ ಸಿಬ್ಬಂದಿ ಕೆಲಸ ನಿರ್ವಹಿಸಬೇಕಾಯಿತು. ಸೋಮವಾರ ಸದನದ ಕಲಾಪದಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಯ ಸಿಗುವುದಿಲ್ಲ ಎಂಬ ಕಾರಣಕ್ಕಾಗಿ ಶಾಸಕರ ಅನರ್ಹತೆಗೆ ಸಂಬಂಧಿಸಿದ ಅರ್ಜಿಗಳನ್ನು ಇತ್ಯರ್ಥ ಮಾಡಿದ್ದೇನೆ’ ಎಂದು ಹೇಳಿದರು.