ಸಭಾಧ್ಯಕ್ಷರು ಬೆಳಿಗ್ಗೆ ಕಚೇರಿಗೆ ಬರುತ್ತಿದ್ದಂತೆ ಬಿಜೆಪಿ ಮುಖಂಡರಾದ ಬಸವರಾಜ ಬೊಮ್ಮಾಯಿ, ಮಾಧುಸ್ವಾಮಿ ಭೇಟಿಯಾದರು. ಶಾಸಕರ ರಾಜೀನಾಮೆ ಬಗ್ಗೆ ಸುಧೀರ್ಘವಾಗಿ ಚರ್ಚೆ ನಡೆಸಿದರು. ಇದಾದ ಕೆಲ ಹೊತ್ತಿನಲ್ಲೇ ಕಾಂಗ್ರೆಸ್ ಮುಖಂಡರು ಭೇಟಿಯಾದರು. ನಂತರ ಬಂದ ಮುಖಂಡ ಸಿದ್ದರಾಮಯ್ಯ ಕೆಲ ಕಾಲ ಚರ್ಚಿಸಿದರು. ರಾಜೀನಾಮೆ ನೀಡಿರುವ ಶಾಸಕರನ್ನು ಅನರ್ಹಗೊಳಿಸಬೇಕು.