ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್ 5ಕ್ಕೆ ಬಜೆಟ್ | ಮಾಧ್ಯಮಗಳಿಗೆ ಅವಕಾಶ ಇಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ

Last Updated 14 ಫೆಬ್ರುವರಿ 2020, 8:33 IST
ಅಕ್ಷರ ಗಾತ್ರ

ಬೆಂಗಳೂರು: ಮಾರ್ಚ್ 5 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಈ ಬಾರಿ ಅಧಿವೇಶನಕ್ಕೆಎಲೆಕ್ಟ್ರಾನಿಕ್ ಮಾಧ್ಯಮಗಳ ಕ್ಯಾಮರಾಗಳಿಗೆ ವಿಧಾನಸಭೆಯ ಒಳಗೆ ಅವಕಾಶವಿಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿರುವ ಅವರು, ಲೋಕಸಭೆ ಮತ್ತು ರಾಜ್ಯಸಭೆ ಮಾದರಿಯ ವ್ಯವಸ್ಥೆ ಇಲ್ಲೂ ಪಾಲಿಸಲಾಗುತ್ತದೆ ಎಂದರು.

ಫೆಬ್ರುವರಿ 17ರಿಂದ 31ರವರಗೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಮಾರ್ಚ್ 2 ಮತ್ತು 3ರಂದು ಸಂವಿಧಾನದ ಕುರಿತು ಚರ್ಚೆ ನಡೆಯಲಿದೆ. ಮಾರ್ಚ್ 5 ರಂದು ಬಜೆಟ್ ಮಂಡನೆ ಆಗಲಿದೆ ಎಂದರು.ಅಧಿವೇಶನದಲ್ಲಿ ಒಟ್ಟು 6 ಮಸೂದೆ ಮಂಡನೆ ಆಗಲಿವೆ. ಎಲ್ಲಾ ಸದಸ್ಯರು ಅಧಿವೇಶನದ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಾಗೇರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT