<p><strong>ಬೆಂಗಳೂರು:</strong> ಪದವಿಪೂರ್ವ ಕಾಲೇಜುಗಳಿಗೆ 2008ರ ಆಗಸ್ಟ್ 1ರ ಬಳಿಕ ನೇಮಕಗೊಂಡ ಉಪನ್ಯಾಸಕರಿಗೆ ವಿಶೇಷ ಭತ್ಯೆ ನೀಡುವ ಕುರಿತಂತೆ ಸರ್ಕಾರ ಚಿಂತನೆ ಆರಂಭಿಸಿದೆ.</p>.<p>ವಿವಿಧ ಉಪನ್ಯಾಸಕರ ಸಂಘಗಳ ಬೇಡಿಕೆಗಳು, ಕೋರ್ಟ್ ತೀರ್ಪು, ಶಿಕ್ಷಣ ಸಚಿವರೊಂದಿಗೆ ನಡೆಸಿದ ಮಾತುಕತೆಗಳು ಸಹಿತ ಹಲವಾರು ದಾಖಲೆಗಳನ್ನು ಮುಂದಿಟ್ಟು, ವಿಶೇಷ ಭತ್ಯೆ ನೀಡುವ ವಿಚಾರದಲ್ಲಿ ಮಾರ್ಗದರ್ಶನ ನೀಡಬೇಕು ಎಂದು ಇಲಾಖೆಯ ನಿರ್ದೇಶಕರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಸರ್ಕಾರದ ಆದೇಶದಂತೆ2008ರ ನಂತರ ನೇಮಕಗೊಂಡ ಉಪನ್ಯಾಸಕರ ಭತ್ಯೆ ವಸೂಲಿ ಮಾಡಲು ಪ್ರಾಂಶುಪಾಲರು ಮುಂದಾಗಿದ್ದರು. ಈ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ಗಳು ವಿಶೇಷ ಭತ್ಯೆ ವಸೂಲಿ ಮಾಡದಂತೆ ಸೂಚಿಸಿವೆ.ವಿಶೇಷ ಭತ್ಯೆಯನ್ನು ವೇತನದಲ್ಲಿ ವಿಲೀನಗೊಳಿಸುವ ಸಂಬಂಧ ಕಡತದ ಪ್ರಕ್ರಿಯೆಯು ಪ್ರಗತಿಯಲ್ಲಿದೆ, ಈಗಲಾದರೂ ವಿಶೇಷ ಭತ್ಯೆ ನೀಡಬೇಕು’ ಎಂದುಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಒತ್ತಾಯಿಸಿದ್ದಾರೆ.</p>.<p>ವಿಶೇಷ ಭತ್ಯೆ ನೀಡಲು ಮುಂದಾದರೆ ಪ್ರೌಢಶಾಲೆ ಅಧ್ಯಾಪಕರಿಗೂ ಅನುಕೂಲವಾಗಲಿದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ. ಕರಬಸಪ್ಪ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪದವಿಪೂರ್ವ ಕಾಲೇಜುಗಳಿಗೆ 2008ರ ಆಗಸ್ಟ್ 1ರ ಬಳಿಕ ನೇಮಕಗೊಂಡ ಉಪನ್ಯಾಸಕರಿಗೆ ವಿಶೇಷ ಭತ್ಯೆ ನೀಡುವ ಕುರಿತಂತೆ ಸರ್ಕಾರ ಚಿಂತನೆ ಆರಂಭಿಸಿದೆ.</p>.<p>ವಿವಿಧ ಉಪನ್ಯಾಸಕರ ಸಂಘಗಳ ಬೇಡಿಕೆಗಳು, ಕೋರ್ಟ್ ತೀರ್ಪು, ಶಿಕ್ಷಣ ಸಚಿವರೊಂದಿಗೆ ನಡೆಸಿದ ಮಾತುಕತೆಗಳು ಸಹಿತ ಹಲವಾರು ದಾಖಲೆಗಳನ್ನು ಮುಂದಿಟ್ಟು, ವಿಶೇಷ ಭತ್ಯೆ ನೀಡುವ ವಿಚಾರದಲ್ಲಿ ಮಾರ್ಗದರ್ಶನ ನೀಡಬೇಕು ಎಂದು ಇಲಾಖೆಯ ನಿರ್ದೇಶಕರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಸರ್ಕಾರದ ಆದೇಶದಂತೆ2008ರ ನಂತರ ನೇಮಕಗೊಂಡ ಉಪನ್ಯಾಸಕರ ಭತ್ಯೆ ವಸೂಲಿ ಮಾಡಲು ಪ್ರಾಂಶುಪಾಲರು ಮುಂದಾಗಿದ್ದರು. ಈ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ಗಳು ವಿಶೇಷ ಭತ್ಯೆ ವಸೂಲಿ ಮಾಡದಂತೆ ಸೂಚಿಸಿವೆ.ವಿಶೇಷ ಭತ್ಯೆಯನ್ನು ವೇತನದಲ್ಲಿ ವಿಲೀನಗೊಳಿಸುವ ಸಂಬಂಧ ಕಡತದ ಪ್ರಕ್ರಿಯೆಯು ಪ್ರಗತಿಯಲ್ಲಿದೆ, ಈಗಲಾದರೂ ವಿಶೇಷ ಭತ್ಯೆ ನೀಡಬೇಕು’ ಎಂದುಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಒತ್ತಾಯಿಸಿದ್ದಾರೆ.</p>.<p>ವಿಶೇಷ ಭತ್ಯೆ ನೀಡಲು ಮುಂದಾದರೆ ಪ್ರೌಢಶಾಲೆ ಅಧ್ಯಾಪಕರಿಗೂ ಅನುಕೂಲವಾಗಲಿದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ. ಕರಬಸಪ್ಪ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>