‘ಅಧಿಕಾರಿಯ ಅಮಾನತು ಮಾಡಿ ಎಂದು ನೀವು ಆದೇಶ ಹೊರಡಿಸಿರುವುದು ಸರಿಯಲ್ಲ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಗಾದೆ ಎತ್ತಿದರು. ‘ನಾನು ಆದೇಶ ಮಾಡಿಲ್ಲಪ್ಪ, ವಿನಮ್ರವಾಗಿ ಮನವಿ ಮಾಡಿದ್ದೇನೆ’ ಎಂದು ರಮೇಶ್ ಕುಮಾರ್ ಸ್ಪಷ್ಟಪಡಿಸಿದರು. ಈ ವಿಷಯದ ಬಗ್ಗೆ ಸೋಮವಾರ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ರಾಮಸ್ವಾಮಿ ಅವರಿಗೆ ಭರವಸೆ ನೀಡಿದರು.