ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಥಹಳ್ಳಿ ತಾಲ್ಲೂಕಿನ ಹೆಗಲತ್ತಿ ಸೇರಿದಂತೆವಿವಿಧೆಡೆ ಮಂಗಳವಾರ ಮುಂಜಾನೆ ಪ್ರವಾಹ ಪೀಡಿತ ಪ್ರದೇಶಗಳನ್ನು ಅವಲೋಕಿಸಿದರು.
ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಪ್ರವಾಹ ಸಂತ್ರಸ್ತ ಪ್ರದೇಶಗಳಿಗೆ ಸರ್ಕಾರ ಶೀಘ್ರ ವಿಶೇಷ ಪ್ಯಾಕೇಜ್ಘೋಷಿಸಲಿದೆ’ ಎಂದರು.
‘ಪ್ರವಾಹದಿಂದ ಆಗಿರುವ ಹಾನಿಯ ಅಂದಾಜು ಮಾಡಿ ಶೀಘ್ರ ವರದಿ ಸಲ್ಲಿಸಬೇಕು’ ಎಂದು ಇದೇ ಸಂದರ್ಭ ಜಿಲ್ಲಾಡಳಿತಕ್ಕೆ ಸೂಚಿಸಿದರು. ‘ಬೆಳೆನಷ್ಟವಾಗಿರುವರೈತರು ಕಂಗೆಡಬೇಕಿಲ್ಲ. ರೈತರ ಹಿತ ಕಾಡಲು ಸರ್ಕಾರ ಬದ್ಧವಾಗಿದೆ’ಎಂದು ಭರವಸೆ ನೀಡಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹ ಪೀಡಿತಕ್ಕೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿ, ವೀಕ್ಷಣೆ ಮಾಡಲಾಯಿತು. ಜಿಲ್ಲೆಯಲ್ಲಿ ಹಾನಿಗೊಳಗಾದ ಪ್ರದೇಶಗಳ ಕುರಿತು ಮಾಹಿತಿ ಪಡೆದು, ನೆರೆ ಸಂತ್ರಸ್ತರಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ. #KarnatakaFloodspic.twitter.com/WL3je8GjKZ
ಆರೋಗ್ಯ ಇಲಾಖೆ ಮುಂಜಾಗ್ರತೆ ಜಿಲ್ಲೆಯಲ್ಲಿ ಪ್ರವಾಹ ಇಳಿಮುಖವಾಗಿದೆ. ಇದೀಗವೈದ್ಯರ ತಂಡಹಾಗೂ ಆಶಾ ಕಾರ್ಯಕರ್ತೆಯರು ಹಳ್ಳಿಗಳಿಗೆ ತೆರಳಿ ಒಆರ್ಎಸ್ ಮತ್ತು ಹ್ಯಾಲೋಜನ್ ಮಾತ್ರೆ ವಿತರಿಸುತ್ತಿದ್ದಾರೆ.ರೋಗಗಳು ಹರಡದಂತೆ ಮುಂಜಾಗ್ರತಾಕ್ರಮವಾಗಿ ಅಲ್ಲಲ್ಲಿಬ್ಲೀಚಿಂಗ್ ಪೌಡರ್ ಸಿಂಪಡಿಸಲಾಗುತ್ತಿದೆ.
ಶಿವಮೊಗ್ಗ ಪ್ರವಾಹ ನಂತರ ವೈದ್ಯಕೀಯ ತಂಡ ಹಾಗೂ ಆಶಾ ಕಾರ್ಯಕರ್ತೆಯರಿಂದ ಓ.ಆರ್.ಎಸ್ ಮತ್ತು ಹ್ಯಾಲೋಜನ್ ಮಾತ್ರೆ ವಿತರಿಸಿ ರೋಗಗಳು ಹರಡದಂತೆ ಮುಂಜಾಗೃತ ಕ್ರಮವಾಗಿನ ಬ್ಲೀಚಿಂಗ್ ಪೌಡರ್ ಸಿಂಪಡಿಸಲಾಯಿತು. pic.twitter.com/dAUnmBzbmX