ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥಹಳ್ಳಿ | ಪ್ರವಾಹ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್, ಮುಖ್ಯಮಂತ್ರಿ ಭರವಸೆ

Last Updated 13 ಆಗಸ್ಟ್ 2019, 4:25 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಥಹಳ್ಳಿ ತಾಲ್ಲೂಕಿನ ಹೆಗಲತ್ತಿ ಸೇರಿದಂತೆವಿವಿಧೆಡೆ ಮಂಗಳವಾರ ಮುಂಜಾನೆ ಪ್ರವಾಹ ಪೀಡಿತ ಪ್ರದೇಶಗಳನ್ನು ಅವಲೋಕಿಸಿದರು.

ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಪ್ರವಾಹ ಸಂತ್ರಸ್ತ ಪ್ರದೇಶಗಳಿಗೆ ಸರ್ಕಾರ ಶೀಘ್ರ ವಿಶೇಷ ಪ್ಯಾಕೇಜ್ಘೋಷಿಸಲಿದೆ’ ಎಂದರು.

‘ಪ್ರವಾಹದಿಂದ ಆಗಿರುವ ಹಾನಿಯ ಅಂದಾಜು ಮಾಡಿ ಶೀಘ್ರ ವರದಿ ಸಲ್ಲಿಸಬೇಕು’ ಎಂದು ಇದೇ ಸಂದರ್ಭ ಜಿಲ್ಲಾಡಳಿತಕ್ಕೆ ಸೂಚಿಸಿದರು. ‘ಬೆಳೆನಷ್ಟವಾಗಿರುವರೈತರು ಕಂಗೆಡಬೇಕಿಲ್ಲ. ರೈತರ ಹಿತ ಕಾಡಲು ಸರ್ಕಾರ ಬದ್ಧವಾಗಿದೆ’ಎಂದು ಭರವಸೆ ನೀಡಿದರು.

ಆರೋಗ್ಯ ಇಲಾಖೆ ಮುಂಜಾಗ್ರತೆ
ಜಿಲ್ಲೆಯಲ್ಲಿ ಪ್ರವಾಹ ಇಳಿಮುಖವಾಗಿದೆ. ಇದೀಗವೈದ್ಯರ ತಂಡಹಾಗೂ ಆಶಾ ಕಾರ್ಯಕರ್ತೆಯರು ಹಳ್ಳಿಗಳಿಗೆ ತೆರಳಿ ಒಆರ್‌ಎಸ್ ಮತ್ತು ಹ್ಯಾಲೋಜನ್ ಮಾತ್ರೆ ವಿತರಿಸುತ್ತಿದ್ದಾರೆ.ರೋಗಗಳು ಹರಡದಂತೆ ಮುಂಜಾಗ್ರತಾಕ್ರಮವಾಗಿ ಅಲ್ಲಲ್ಲಿಬ್ಲೀಚಿಂಗ್ ಪೌಡರ್ ಸಿಂಪಡಿಸಲಾಗುತ್ತಿದೆ.

ಚಿಕ್ಕಮಗಳೂರು ತಾಲ್ಲೂಕಿನ ಗಿರಿಶ್ರೇಣಿಯ ಬಾಬಾಬುಡನ್ ಗಿರಿ ಮಾರ್ಗದ ಮಹಲ್ ಬಳಿ ಗುಡ್ಡದ ಮಣ್ಣು ರಸ್ತೆಗೆ ಅಡ್ಡಲಾಗಿ ಕುಸಿದಿದೆ.
ಚಿಕ್ಕಮಗಳೂರು ತಾಲ್ಲೂಕಿನ ಗಿರಿಶ್ರೇಣಿಯ ಬಾಬಾಬುಡನ್ ಗಿರಿ ಮಾರ್ಗದ ಮಹಲ್ ಬಳಿ ಗುಡ್ಡದ ಮಣ್ಣು ರಸ್ತೆಗೆ ಅಡ್ಡಲಾಗಿ ಕುಸಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT