ಕೊಪ್ಪಳ:ವ್ಯಾಸರಾಜರ ಬೃಂದಾವನಧ್ವಂಸಗೊಳಿಸಿರುವ ಆರೋಪಿಗಳ ಪತ್ತೆಗಾಗಿಗಂಗಾವತಿ ಸಿಪಿಐ ಸುರೇಶ್ ತಳವಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿರೇಣುಕಾ ಸುಕುಮಾರ್ ತಿಳಿಸಿದರು.
ಘಟನಾ ಸ್ಥಳಕ್ಕೆಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿದ್ದರು.ವೈಜ್ಞಾನಿಕ ತಳಹದಿ ಮೇಲೆ ತನಿಖೆ ಕೈಗೊಂಡಿದ್ದು, ಆರೋಪಿಗಳನ್ನು ಶೀಘ್ರದಲ್ಲಿಯೇ ಪತ್ತೆ ಮಾಡಲಾಗುವುದು. ಸಾರ್ವಜನಿಕರು ವದಂತಿಗೆ ಕಿವಿಗೊಡದೇ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು.