ಅಂದು ಸಂಜೆ 4.45ಕ್ಕೆ ಮೈಸೂರಿನಿಂದ ಹೊರಡುವ ರೈಲು ಮರುದಿನ ಬೆಳಿಗ್ಗೆ 10.30ಕ್ಕೆ ವಿಜಯಪುರ ತಲುಪಲಿದೆ. ಮಂಡ್ಯ, ರಾಮನಗರ, ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ, ತೋರಣಗಲ್, ಹೊಸಪೇಟೆ, ಕೊಪ್ಪಳ, ಗದಗ, ಹೊಳೆಆಲೂರು, ಬದಾಮಿ, ಬಾಗಲಕೋಟೆ, ಆಲಮಟ್ಟಿ ಮತ್ತು ಬಸವನಬಾಗೇವಾಡಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.