ಚಿತ್ರದುರ್ಗ: ‘ಸಿದ್ದರಾಮಯ್ಯ ಒಬ್ಬ ದುರಂಹಕಾರಿ. ಅವರಿಗೆ ಅಹಂ ಹೆಚ್ಚಾಗಿದೆ. ಸಮಯಕ್ಕೆ ಸರಿಯಾಗಿ ಭಗವಂತನೇ ಬುದ್ಧಿ ಕಲಿಸುತ್ತಾನೆ’ ಎಂದು ಶಾಸಕ ಬಿ. ಶ್ರೀರಾಮುಲು ಹರಿಹಾಯ್ದರು.
‘ಬಿಜೆಪಿ ಮುಳುಗುವ ಹಡಗು’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಚಳ್ಳಕೆರೆ ತಾಲ್ಲೂಕಿನ ಚಿಕ್ಕಹಳ್ಳಿಯಲ್ಲಿ ತಿರುಗೇಟು ನೀಡಿದರು.
‘ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಬಗ್ಗೆ ದುರಹಂಕಾರದಿಂದ ಮಾತನಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಅಹಂ ಇಳಿಸಲಿದ್ದೇವೆ’ ಎಂದರು.
‘ಸಚಿವ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ರಮೇಶ ಜಾರಕಿಹೊಳಿ ಅವರಿಗೆ ನೋವಾಗಿದೆ. ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದರು.