ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ತಾಲ್ಲೂಕಿನ ವಡ್ಡರಹಳ್ಳಿ ನಿವಾಸಿ ನಬಿ ರಸೂಲ್ ಅವರ ಮನೆಗೆ ಶುಕ್ರವಾರ ಶ್ರೀರಾಮ ಸೇನೆಯ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ನಬಿ ಅವರನ್ನು ಮನೆಯಿಂದ ಹೊರಗೆ ಕರೆಸಿ ಗ್ರಾಮಸ್ಥರ ಸಮ್ಮುಖದಲ್ಲಿ ಕ್ಷಮೆ ಕೇಳಿಸಿದರು. ನಂತರ ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿಸಿದರು.
‘ನಬಿ ಅವರು ಮೋದಿ ಅವರ ಛಾಯಾಚಿತ್ರಗಳನ್ನು ಎಡಿಟ್ ಮಾಡಿ, ಅವರನ್ನು ಅಪಮಾನಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು. ವಿಷಯ ತಿಳಿದು ಅವರ ಮನೆಗೆ ಹೋಗಿ ಅಲ್ಲಿ ಪ್ರತಿಭಟನೆ ನಡೆಸಲಾಗಿದೆ. ಗ್ರಾಮಸ್ಥರ ಸಮ್ಮುಖದಲ್ಲಿ ಕ್ಷಮೆ ಕೇಳಿಸಲಾಗಿದೆ. ಇಂತಹ ಘಟನೆಗಳು ಪುನರಾವರ್ತನೆ ಆಗಬಾರದು ಎಂದು ಎಚ್ಚರಿಕೆ ಕೊಡಲಾಗಿದೆ’ ಎಂದು ಸೇನೆಯ ಕಾರ್ಯಾಧ್ಯಕ್ಷ ಅನೂಪ್ ಕುಮಾರ್ ತಿಳಿಸಿದರು.
ಸೇನೆಯ ತಾಲ್ಲೂಕು ಅಧ್ಯಕ್ಷ ಜಗದೀಶ್ ಕಾಮಟಗಿ, ಮುಖಂಡರಾದ ಕಿಚಿಡಿ ಲಕ್ಷ್ಮಣ, ಬಂಗಾರು ಸೂರಿ, ಸಪ್ತಗಿರಿ, ರಾಜಾಹುಲಿ, ಹುಲುಗಪ್ಪ ಇದ್ದರು.