ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ‘ಶ್ರೀವಿಜಯ ಸಾಹಿತ್ಯ ಪ್ರಶಸ್ತಿ’ಗೆ ಪ್ರಸಕ್ತ ಸಾಲಿನಲ್ಲಿ ಲೇಖಕಿ ಡಾ.ಜಯದೇವಿ ಗಾಯಕವಾಡ ಹಾಗೂ ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಚ.ಹ.ರಘುನಾಥ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರಕ್ಕೆ ಮೌಲಿಕವಾದ ಕೊಡುಗೆ ನೀಡಿದವರಿಗೆ ನೀಡುವ ಈ ಪ್ರಶಸ್ತಿಯು ತಲಾ ₹60 ಸಾವಿರ ಒಳಗೊಂಡಿದೆ.