ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶ್ರೀವಿಜಯ’ ಪ್ರಶಸ್ತಿ ಪ್ರಕಟ

Last Updated 20 ಅಕ್ಟೋಬರ್ 2018, 19:05 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ‘ಶ್ರೀವಿಜಯ ಸಾಹಿತ್ಯ ಪ್ರಶಸ್ತಿ’ಗೆ ಪ್ರಸಕ್ತ ಸಾಲಿನಲ್ಲಿ ಲೇಖಕಿ ಡಾ.ಜಯದೇವಿ ಗಾಯಕವಾಡ ಹಾಗೂ ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಚ.ಹ.ರಘುನಾಥ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರಕ್ಕೆ ಮೌಲಿಕವಾದ ಕೊಡುಗೆ ನೀಡಿದವರಿಗೆ ನೀಡುವ ಈ ಪ್ರಶಸ್ತಿಯು ತಲಾ ₹60 ಸಾವಿರ ಒಳಗೊಂಡಿದೆ.

ಪ್ರಾಧ್ಯಾಪಕಿ ಡಾ.ಸಮತಾ ಬಿ.ದೇಶಮಾನೆ ಅವರು ‘ಟಿ.ಶ್ರೀನಿವಾಸ ಸ್ಮರಣಾರ್ಥ ಪಿ.ಕೆ.ನಾರಾಯಣ–ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಆಯ್ಕೆ ಆಗಿದ್ದಾರೆ. ಎಲೆಮರೆ ಕಾಯಿಯಂತೆ ಇದ್ದು ಸಾಹಿತ್ಯಕ್ಕೆ ಕೊಡುಗೆ ನೀಡಿದವರಿಗೆ ಕೊಡ ಮಾಡುವ ಈ ಪ್ರಶಸ್ತಿಯು ₹ 10 ಸಾವಿರ ಒಳಗೊಂಡಿದೆ ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT