ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಬಾಂಬ್ ಸ್ಫೋಟ: ರಮೇಶ್ ಗೌಡ ಕುಟುಂಬ ಸದಸ್ಯರ ಆಕ್ರಂದನ

Last Updated 22 ಏಪ್ರಿಲ್ 2019, 19:51 IST
ಅಕ್ಷರ ಗಾತ್ರ

ತುಮಕೂರು: ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿರುವ ನಗರದ ಸರಸ್ವತಿಪುರಂ ನಿವಾಸಿ, ಮದ್ಯದ ವ್ಯಾಪಾರಿ ರಮೇಶ್ ಗೌಡ ಅವರ ಮನೆಯಲ್ಲಿ ನೋವು ತೀವ್ರವಾಗಿ ಮಡುಗಟ್ಟಿದೆ.

ಅವರಿಗೆ ಪತ್ನಿ ಮಂಜುಳಾ, ಪುತ್ರ ಶೋಭಿತ್ ಹಾಗೂ ಪುತ್ರಿ ದಿಶಾ ಇದ್ದಾರೆ. ಕುಣಿಗಲ್‌ನ ರಮೇಶ್ ಗೌಡ ನಗರದಲ್ಲಿ ವಾಸಿಸುತ್ತಿದ್ದರು. ನೆಲಮಂಗಲದ ಸ್ನೇಹಿತರ ಜೊತೆ ಅವರು ಶ್ರೀಲಂಕಾಕ್ಕೆ ತೆರಳಿದ್ದರು. ಮಾಧ್ಯಮಗಳ ಮೂಲಕವೇ ಈ ಸಾವಿನ ಸುದ್ದಿ ಮನೆಯವರಿಗೆ ತಿಳಿಯಿತು.

ಸುದ್ದಿ ತಿಳಿದ ನಂತರ ಮನೆಯಿಂದ ಹೊರಗೆ ಅವರ ಕುಟುಂಬ ಸದಸ್ಯರು ಬರಲಿಲ್ಲ. ಮನೆಯೊಳಗಿನಿಂದ ಅಳುವ ಸದ್ದು ತೀವ್ರವಾಗಿ ಕೇಳುತ್ತಿತ್ತು. ರಮೇಶ್ ಗೌಡ ಅವರ ಸಹೋದರ ಪ್ರಕಾಶ್ ಅವರಿಂದ ಡಿವೈಎಸ್‌ಪಿ ತಿಪ್ಪೇಸ್ವಾಮಿ ಮಾಹಿತಿ ಪಡೆದರು. ಶವ ತರುವ ಸಲುವಾಗಿ ದಾಖಲೆಗಳೊಂದಿಗೆ ಪ್ರಕಾಶ್, ಶ್ರೀಲಂಕಾಕ್ಕೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT