ನಂತರ ಶಾರದಾ ಸನ್ನಿಧಿಯಲ್ಲಿ ಹಗಲು ರಾಜ ದರ್ಬಾರ್ ನಡೆಯಿತು. ವಿಧುಶೇಖರ ಭಾರತಿ ಸ್ವಾಮೀಜಿ ಅವರು ರಾಜ ಪೋಷಾಕಿನಲ್ಲಿ ಸ್ವರ್ಣ ಖಚಿತ ಸಿಂಹಾಸನದಲ್ಲಿ ಆಸೀನರಾಗಿ, ಭಕ್ತರನ್ನು ಆಶೀರ್ವದಿಸಿದರು. ಚತುರ್ವೇದ ಪಾರಾಯಣ, ವಾಲ್ಮೀಕಿ ರಾಮಾಯಣ, ದೇವಿ ಭಾಗವತ, ಶಂಕರ ದಿಗ್ವಿಜಯ ಪಾರಾಯಣಗಳು ನಡೆಯಿತು. ದೇವಿ ಸಪ್ತಶತಿ ಪಾರಾಯಣದ 13ನೇ ಅಧ್ಯಾಯವನ್ನು ಮಠದ ವಿದ್ವಾಂಸ ಶಿವಕುಮಾರ ಶರ್ಮ ವಾಚಿಸಿದರು. ಇದಕ್ಕೂ ಮೊದಲು ಚಿನ್ನದ ರಥದಲ್ಲಿ ಶಾರದಾ ದೇವಿಯನ್ನು ಪ್ರತಿಷ್ಠಾಪಿಸಿ, ದೇವಸ್ಥಾನದ ಒಳಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು.