ಮೂರು ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಿಂದ ಶ್ರೀನಿವಾಸ್ ಪ್ರಸಾದ್ ಅವರನ್ನು ಕೈಬಿಟ್ಟ ನಂತರ ಇಬ್ಬರ ನಡುವೆ ಮುನಿಸು ಮನೆ ಮಾಡಿತ್ತು. ನಂತರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಶ್ರೀನಿವಾಸ ಪ್ರಸಾದ್, ಸಿದ್ದರಾಮಯ್ಯ ಅವರನ್ನು ಬಹಿರಂಗವಾಗಿ ಏಕವಚನದಲ್ಲೇ ಟೀಕಿಸಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿಬಿಜೆಪಿ ಸೇರಿದ್ದ ಅವರು ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಗೆಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದರು. ಚುನಾವಣೆ ಸೋಲು ಇಬ್ಬರೂ ನಾಯಕರ ನಡುವಿನ ಮುನಿಸನ್ನು ಮತ್ತಷ್ಟು ಹೆಚ್ಚಿಸಿತ್ತು.