<p><strong>ಚಾಮರಾಜನಗರ:</strong> ‘ನಾನು ಮತ್ತು ಎಚ್.ವಿಶ್ವನಾಥ್ 45 ವರ್ಷಗಳಿಂದ ಸ್ನೇಹಿತರು. ಆಗಾಗ್ಗೆ ಭೇಟಿಯಾಗುತ್ತಿರುತ್ತೇವೆ. ಆದರೆ, ಈಗ ನಡೆದಿರುವ ರಾಜಕೀಯ ಬೆಳವಣಿಗೆಗೆ ನಾನು ಜವಾಬ್ದಾರನಲ್ಲ’ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಭಾನುವಾರ ಇಲ್ಲಿ ಸ್ಪಷ್ಟಪಡಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಸಕ್ತ ರಾಜಕೀಯ ಬೆಳವಣಿಗೆಗೂ ಮುಂಚೆ ನಮ್ಮ ಭೇಟಿ ಆಗಿರುವುದು ಕಾಕತಾಳೀಯ ಅಷ್ಟೆ’ ಎಂದರು.</p>.<p>‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿದ್ದವರನ್ನು ಸಮನ್ವಯ ಸಮಿತಿಗೆ ಸೇರಿಸಿಕೊಳ್ಳಲಿಲ್ಲ. ಈ ಹಿಂದೆ ಅವರು ಹಳ್ಳಿ ಹಕ್ಕಿಯ ಹಾಡು ಎಂಬ ಪುಸ್ತಕ ಬರೆದಿದ್ದರು. ಈಗ ಹಳ್ಳಿ ಹಕ್ಕಿಯ ಗೋಳು ಎಂಬ ಪುಸ್ತಕ ಬರೆಯಬೇಕಿದೆ’ ಎಂದರು.</p>.<p>‘ಈಗಿನ ರಾಜಕೀಯ ಬೆಳವಣಿಗೆಗಳಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರಣ. ಈ ದೋಸ್ತಿ ಸರ್ಕಾರದಲ್ಲಿ ಸಮನ್ವಯ ಎಂಬುದೇ ಇಲ್ಲ. ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಶಾಸಕರಲ್ಲಿ ಅತೃಪ್ತಿ ಇದೆ’ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ನಾನು ಮತ್ತು ಎಚ್.ವಿಶ್ವನಾಥ್ 45 ವರ್ಷಗಳಿಂದ ಸ್ನೇಹಿತರು. ಆಗಾಗ್ಗೆ ಭೇಟಿಯಾಗುತ್ತಿರುತ್ತೇವೆ. ಆದರೆ, ಈಗ ನಡೆದಿರುವ ರಾಜಕೀಯ ಬೆಳವಣಿಗೆಗೆ ನಾನು ಜವಾಬ್ದಾರನಲ್ಲ’ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಭಾನುವಾರ ಇಲ್ಲಿ ಸ್ಪಷ್ಟಪಡಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಸಕ್ತ ರಾಜಕೀಯ ಬೆಳವಣಿಗೆಗೂ ಮುಂಚೆ ನಮ್ಮ ಭೇಟಿ ಆಗಿರುವುದು ಕಾಕತಾಳೀಯ ಅಷ್ಟೆ’ ಎಂದರು.</p>.<p>‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿದ್ದವರನ್ನು ಸಮನ್ವಯ ಸಮಿತಿಗೆ ಸೇರಿಸಿಕೊಳ್ಳಲಿಲ್ಲ. ಈ ಹಿಂದೆ ಅವರು ಹಳ್ಳಿ ಹಕ್ಕಿಯ ಹಾಡು ಎಂಬ ಪುಸ್ತಕ ಬರೆದಿದ್ದರು. ಈಗ ಹಳ್ಳಿ ಹಕ್ಕಿಯ ಗೋಳು ಎಂಬ ಪುಸ್ತಕ ಬರೆಯಬೇಕಿದೆ’ ಎಂದರು.</p>.<p>‘ಈಗಿನ ರಾಜಕೀಯ ಬೆಳವಣಿಗೆಗಳಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರಣ. ಈ ದೋಸ್ತಿ ಸರ್ಕಾರದಲ್ಲಿ ಸಮನ್ವಯ ಎಂಬುದೇ ಇಲ್ಲ. ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಶಾಸಕರಲ್ಲಿ ಅತೃಪ್ತಿ ಇದೆ’ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>