<p><strong>ಮೈಸೂರು:</strong> ‘ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡುವುದು, ಹೋಮ–ಹವನದಲ್ಲಿ ಪಾಲ್ಗೊಳ್ಳುವುದು ಅವರವರ ವೈಯಕ್ತಿಕ ವಿಚಾರ. ಆದರೆ ಮುಖ್ಯಮಂತ್ರಿಯಾದವರು ತಮ್ಮ ಸ್ಥಾನದ ಜವಾಬ್ದಾರಿ ಅರಿತು ಕೆಲಸ ಮಾಡಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಶುಕ್ರವಾರ ಇಲ್ಲಿ ಕಿಡಿಕಾರಿದರು.</p>.<p>‘ಕಡಿಮೆ ಸ್ಥಾನಗಳನ್ನು ಪಡೆದರೂ ಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ. ಜನರ ಸೇವೆ ಮಾಡಲು ಸಾಕಷ್ಟು ಅವಕಾಶಗಳು ಇವೆ ಎಂಬುದನ್ನು ಎಚ್.ಡಿ. ಕುಮಾರಸ್ವಾಮಿ ಅರಿತುಕೊಳ್ಳಲಿ. ಅವರ ತಂದೆ ಈ ಹಿಂದೆ ಪ್ರಧಾನಿಯಾಗಿದ್ದರು. ಆಡಳಿತ ಹೇಗೆ ನಡೆಸಬೇಕು ಎಂದು ಮಗನಿಗೆ ಮಾರ್ಗದರ್ಶನ ಮಾಡಲಿ’ ಎಂದು ಕುಟುಕಿದರು.</p>.<p>‘ಜನಪ್ರತಿನಿಧಿಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಇತ್ತೀಚಿನ ದಿನಗಳಲ್ಲಿ ಸಭ್ಯತೆ ಮೀರಿ ಮಾತನಾಡುತ್ತಿದ್ದಾರೆ. ಕೆಟ್ಟ ಪದಗಳನ್ನು ಬಳಸಿ ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಭ್ಯತೆಯಿಂದ ಮಾತನಾಡಬೇಕು. ಇಲ್ಲದಿದ್ದರೆ ಜನರು ಹಗುರವಾಗಿ ಕಾಣುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡುವುದು, ಹೋಮ–ಹವನದಲ್ಲಿ ಪಾಲ್ಗೊಳ್ಳುವುದು ಅವರವರ ವೈಯಕ್ತಿಕ ವಿಚಾರ. ಆದರೆ ಮುಖ್ಯಮಂತ್ರಿಯಾದವರು ತಮ್ಮ ಸ್ಥಾನದ ಜವಾಬ್ದಾರಿ ಅರಿತು ಕೆಲಸ ಮಾಡಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಶುಕ್ರವಾರ ಇಲ್ಲಿ ಕಿಡಿಕಾರಿದರು.</p>.<p>‘ಕಡಿಮೆ ಸ್ಥಾನಗಳನ್ನು ಪಡೆದರೂ ಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ. ಜನರ ಸೇವೆ ಮಾಡಲು ಸಾಕಷ್ಟು ಅವಕಾಶಗಳು ಇವೆ ಎಂಬುದನ್ನು ಎಚ್.ಡಿ. ಕುಮಾರಸ್ವಾಮಿ ಅರಿತುಕೊಳ್ಳಲಿ. ಅವರ ತಂದೆ ಈ ಹಿಂದೆ ಪ್ರಧಾನಿಯಾಗಿದ್ದರು. ಆಡಳಿತ ಹೇಗೆ ನಡೆಸಬೇಕು ಎಂದು ಮಗನಿಗೆ ಮಾರ್ಗದರ್ಶನ ಮಾಡಲಿ’ ಎಂದು ಕುಟುಕಿದರು.</p>.<p>‘ಜನಪ್ರತಿನಿಧಿಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಇತ್ತೀಚಿನ ದಿನಗಳಲ್ಲಿ ಸಭ್ಯತೆ ಮೀರಿ ಮಾತನಾಡುತ್ತಿದ್ದಾರೆ. ಕೆಟ್ಟ ಪದಗಳನ್ನು ಬಳಸಿ ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಭ್ಯತೆಯಿಂದ ಮಾತನಾಡಬೇಕು. ಇಲ್ಲದಿದ್ದರೆ ಜನರು ಹಗುರವಾಗಿ ಕಾಣುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>