ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಹೆಸರಿನಲ್ಲಿಕೋವಿಡ್ ಬಗ್ಗೆ ನಕಲಿ ಟ್ವೀಟ್ ಮಾಡಲಾಗಿದೆ.
ಶ್ರೀರಾಮುಲು ಅವರೇ ಹೇಳಿದ ರೀತಿಯಲ್ಲಿ, 'ಗಂಜಲ ಕುಡಿಯುವುದರಿಂದ ಹಾಗೂ ಸಗಣಿಯನ್ನು ದೇಹಕ್ಕೆ ಸವರಿಕೊಳ್ಳುವುದರಿಂದ ಕೊರೊನಾ ವೈರಸ್ ತಡೆಗಟ್ಟಬಹುದು' ಎಂದು ಟ್ವೀಟ್ನಲ್ಲಿಹೇಳಲಾಗಿದೆ.
ಈ ನಕಲಿ ಟ್ವೀಟ್ ಬಗ್ಗೆ ಶ್ರೀರಾಮುಲು, ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರಿಗೆ ಗುರುವಾರ ದೂರು ನೀಡಿದ್ದಾರೆ.
#COVID19 ತರಹದ ಗಂಭೀರ ವಿಷಯದಲ್ಲಿ, ನನ್ನ ಹೆಸರು ಬಳಸಿ #FakeNews (ಸುಳ್ಳು ಸುದ್ದಿ) ಹರಡುತ್ತಿರುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲು @CPBlr ಅವರಿಗೆ ಮನವಿ ಮಾಡಲಾಗಿದೆ. ಇಂತಹ ಸಮಯದಲ್ಲಿ ನಾಗರಿಕರಿಗೆ ಸರಿಯಾದ ಮಾಹಿತಿ ನೀಡಿ, ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಬೇಕೆ ಹೊರತು, ಗೊಂದಲ ಸೃಷ್ಟಿಸುವ ಪ್ರಯತ್ನಕ್ಕೆ ಕೈಹಾಕಬೇಡಿ pic.twitter.com/5gnBpqFgfx