ಸುಬ್ರಹ್ಮಣ್ಯ: ‘ಸೋಮವಾರದಿಂದ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭವಾಗಲಿದೆ. ಜುಲೈ 30ರ ಒಳಗೆ ಮೌಲ್ಯಮಾಪನ ಪೂರ್ಣಗೊಳಿಸಿ, ಆಗಸ್ಟ್ ಮೊದಲನೇ ವಾರದಲ್ಲಿ ಫಲಿತಾಂಶ ನೀಡಲು ಯೋಜಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಆರ್. ಸುರೇಶ್ ಕುಮಾರ್ ಹೇಳಿದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವಿತೀಯ ಪಿಯು ಮೌಲ್ಯಮಾಪನ ನಡೆದಿದ್ದು, ಇದೇ 18ರೊಳಗೆ ಫಲಿತಾಂಶ ಬರಲಿದೆ ಎಂದರು.