ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ‘ಯಾವುದೇ ವಿದ್ಯಾರ್ಥಿ ವಿಚಲಿತಗೊಳ್ಳಬಾರದು. ಓದಿನ ಕಡೆಗೆ ಮನಸ್ಸು ಕೇಂದ್ರೀಕರಿಸಿ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಹಾಸನದಲ್ಲಿ ಕೋವಿಡ್ ಸೋಂಕಿತ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾದ ಕೊಠಡಿಯನ್ನು ಮುಚ್ಚಲಾಗಿದ್ದು, ಸೋಂಕಿತ ವಿದ್ಯಾರ್ಥಿಗೆ ಚಿಕಿತ್ಸೆ ಮುಂದುವರೆದಿದೆ. ಈ ಕೇಂದ್ರದಲ್ಲಿ ಸೋಂಕಿತ ವಿದ್ಯಾರ್ಥಿಯನ್ನು ಹೊರತುಪಡಿಸಿ ಪರೀಕ್ಷೆ ಬರೆದಿದ್ದ ಇತರ ಎಲ್ಲ ವಿದ್ಯಾರ್ಥಿಗಳು ಸೋಮವಾರದಿಂದ ಎಂದಿನಂತೆ ಪರೀಕ್ಷೆ ಬರೆಯಲಿದ್ದಾರೆ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.